Minister questions Sulibele’ s stature: ಚಕ್ರವರ್ತಿ ಸೂಲಿಬೆಲೆಗೆ ಪಠ್ಯಗಳಿಗೆ ಪಾಠ ಬರೆಯುವ ಯೋಗ್ಯತೆ ಇದೆಯೇ? ಪ್ರಿಯಾಂಕ್ ಖರ್ಗೆ, ಸಚಿವ
ಸೂಲಿಬೆಲೆಯಂಥವರನ್ನು ಸಾಹಿತಿ ಅಂತ ಪರಿಗಣಿಸುವಷ್ಟು ಬರಗೆಟ್ಟು ಹೋಗಿದೆಯಾ ರಾಜ್ಯದ ಸಾರಸ್ವತ ಲೋಕ ಎಂದು ಖರ್ಗೆ ಪ್ರಶ್ನಿಸಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಪಠ್ಯ ಪುಸ್ತಕಗಳ ಪರಿಷ್ಕರಣೆ ಕುರಿತಂತೆ ಲೇಖಕ, ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರ (Chakravarthy Sulibele) ಅರ್ಹತೆ ಮತ್ತು ಯೋಗ್ಯತೆಯನ್ನು ಪ್ರಶ್ನಿಸಿದರು. ಬಾಡಿಗೆ ಭಾಷಣಕಾರ ಮತ್ತು ವಾಟ್ಸ್ಯಾಪ್ ಯೂನಿವರ್ಸಿಟಿಗಳ (WhatsApp) ಉಪ ಕುಲಪತಿಗಳು ಬರೆಯುವ ಪಾಠಗಳನ್ನು ನಮ್ಮ ಮಕ್ಕಳು ಓದಬೇಕೆ? ಪಠ್ಯ ಬರೆಯುವ ಯೋಗ್ಯತೆ ಅವರಿಗಿದೆಯೇ ಎಂದು ಖರ್ಗೆ ಕೇಳಿದರು. ಚಕ್ರವರ್ತಿ ಸೂಲಿಬೆಲೆ ಯಾವುದಾರರೂ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆಯೇ? ಇಂಥವರನ್ನೆಲ್ಲ ಸಾಹಿತಿ ಅಂತ ಪರಿಗಣಿಸುವಷ್ಟು ಬರಗೆಟ್ಟು ಹೋಗಿದೆಯಾ ರಾಜ್ಯದ ಸಾರಸ್ವತ ಲೋಕ ಎಂದು ಖರ್ಗೆ ಪ್ರಶ್ನಿಸಿದರು. ಮುಂದುವರಿದು ಮಾತಾಡಿದ ಸಚಿವ, ಭಗತ್ ಸಿಂಗ್ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಅಪಾರ ಗೌರವವಿದೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

