ನನ್ನ ವಿರುದ್ಧ ದಾಖಲಾಗಿರುವ ಎಫ್ಐಅರ್ ಪ್ರತಿ ಹಾಸ್ಯಾಸ್ಪದವಾಗಿದೆ: ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿಯ ವಿರುದ್ಧ ಯಾಕೆ ಎಫ್​ಐಅರ್ ಅಂತ ಅರ್ಥವಾಗುತ್ತಿಲ್ಲ, ಪಕ್ಷದ ಶಾಸಕಾಂಗ ನಾಯಕನ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ನೀಡಿದ ದೂರಿನ ಆಧಾರದ ಮೇಲೆ ಇವರು ಎಫ್​ಐಆರ್ ಹಾಕುತ್ತಾರೆಂದರೆ, ಅಧಿಕಾರಿಗಳು ಪ್ರಶ್ನಾತೀತರು ಮತ್ತು ಅವರ ವಿರುದ್ಧ ದೂರು ಕೊಡುವ ಹಾಗಿಲ್ಲ ಎನ್ನುವಂತಾಯಿತು ಎಂದು ಕುಮಾರಸ್ವಾಮಿ ಹೇಳಿದರು.

ರಾಮನಗರ: ಎಡಿಜಿಪಿ ಎಂ ಚಂದ್ರಶೇಖರ್ ಸಲ್ಲಿಸಿದ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ಎಫ್​ಐಅರ್ ದಾಖಲಿಸಿರುವುದಕ್ಕೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ ಹೆಚ್ ಡಿ ಕುಮಾರಸ್ವಾಮಿ, ಎಫ್​ಐಆರ್ ಪ್ರತಿಯಲ್ಲಿರುವ ವಿವರಣೆ ಹಾಸ್ಯಾಸ್ಪದವಾಗಿದೆ ಎಂದರು. ತಾನು ಯಾರನ್ನೂ ಥ್ರೆಟ್ ಮಾಡಿಲ್ಲ ಮತ್ತು ಯಾವುದೇ ಕಾನೂನುಬಾಹಿರ ಕೆಲಸ ಮಾಡಿಲ್ಲ, ಎಫ್​ಐಅರ್ ಅನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್​​: ಕೇಂದ್ರ ಸಚಿವ ಎ1

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us