ಕುಮಾರಸ್ವಾಮಿ ಜೊತೆ ಯಾವುದೇ ಮಾಧ್ಯಮದಲ್ಲಿ ನೇರಾನೇರ ಚರ್ಚೆಗೆ ಸಿದ್ಧ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 25, 2023 | 4:28 PM

ಒಂದೇ ಸಮುದಾಯದವರು, ಕುಮಾರಸ್ವಾಮಿಯನ್ನು ಟೀಕಿಸುವುದು ಬೇಡ ಅಂತ ದೊಡ್ಡವರು, ತಿಳಿದವರು ಹೇಳಿದ್ದರಿಂದ ಸುಮ್ಮನಿರಬೇಕಾಯಿತು, ಅದರೆ ಇನ್ನು ಸುಮ್ಮನಿರಲ್ಲ, ಸ್ವಾಭಿಮಾನವನ್ನು ಕಡೆಗಣಿಸಲಾಗದು, ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಯಾವುದೇ ಮಾಧ್ಯಮದಲ್ಲಿ ನೇರಾನೇರ ಚರ್ಚೆಗೆ ಸಿದ್ಧನಿರುವುದಾಗಿ ಶಿವಕುಮಾರ್ ಹೇಳಿದರು.

ಬೆಂಗಳೂರು: ಇದನ್ನು ನಿರೀಕ್ಷಿಸಲಾಗಿತ್ತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮಾಡುತ್ತಿರುವ ಎಲ್ಲ ಆರೋಪಗಳಿಗೆ ಉತ್ತರ ನೀಡಲೆಂದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಇಂದು ಕೆಪಿಸಿಸಿ ಕಚೇರಿಯಲ್ಲಿ (KPCC office) ಸುದ್ದಿಗೋಷ್ಟಿ ನಡೆಸಿದರು. ಸುದ್ದಿಗೋಷ್ಟಿಗಳನ್ನು ನಡೆಸಿ ಮಾತಾಡಿದರೆ ಪ್ರಯೋಜನವಿಲ್ಲ, ಜನ ಮಾತುಗಳನ್ನು ನೆನಪಿಟ್ಟುಕೊಳ್ಳಲ್ಲ, ನಾವಾಡಿದ ಮಾತು, ಮಾಡಿದ ಕೆಲಸಗಳು ಮುಂದಿನ ಪೀಳಿಗೆಗಳಿಗೆ ಗೊತ್ತಾಗಬೇಕು, ಆದಾಗಬೇಕಾದರೆ ವಿಧಾನಸಭಾ ಅಧಿವೇಶನದಲ್ಲಿ ಮಾತಾಡಬೇಕು, ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ತೀರ್ಮಾನ ಆಗಿರುವುದರಿಂದ ಕುಮಾರಸ್ವಾಮಿ ದಾಖಲೆಗಳನ್ನಿಟ್ಟುಕೊಂಡು ಅಧಿವೇಶನದಲ್ಲಿ ಮಾತಾಡಲಿ ಎಂದು ಶಿವಕುಮಾರ್ ಹೇಳಿದರು. ಒಂದೇ ಸಮುದಾಯದವರು, ಕುಮಾರಸ್ವಾಮಿಯನ್ನು ಟೀಕಿಸುವುದು ಬೇಡ ಅಂತ ದೊಡ್ಡವರು, ತಿಳಿದವರು ಹೇಳಿದ್ದರಿಂದ ಸುಮ್ಮನಿರಬೇಕಾಯಿತು, ಅದರೆ ಇನ್ನು ಸುಮ್ಮನಿರಲ್ಲ, ಸ್ವಾಭಿಮಾನವನ್ನು ಕಡೆಗಣಿಸಲಾಗದು, ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಯಾವುದೇ ಮಾಧ್ಯಮದಲ್ಲಿ ನೇರಾನೇರ ಚರ್ಚೆಗೆ ಸಿದ್ಧನಿರುವುದಾಗಿ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.