ರಾಮೇಶ್ವರಂ ಕೆಫೆ ಬ್ಲಾಸ್ಟ್; ಇತ್ತೀಚಿನ ಕೆಲ ವಿದ್ಯಮಾನಗಳು ಸರಣಿ ಬಾಂಬ್ ಸ್ಫೋಟಕ್ಕೆ ಪೂರ್ವಸಿದ್ಧತೆಯ ಶಂಕೆ ಮೂಡಿಸುತ್ತವೆ: ಸಿಟಿ ರವಿ

Updated on: Mar 02, 2024 | 1:26 PM

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 21 ಶಂಕಿತ ಭಯೋತ್ಪಾದಕರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ ಎಂದು ಹೇಳಿದರು. ಹಿಂದೆ ಜೈನರ ಕಾಶಿ ಎಂದು ಕರೆಸಿಕೊಂಡಿದ್ದ ಭಟ್ಕಳ ಈಗ ಉಗ್ರರ ನೆಲೆಯಾಗಿದೆ. ಸಿಮಿ ಸಂಘಟನೆಯ ಮೇಲೆ ಎನ್ ಐಎ ದಾಳಿ ನಡೆಸಿದಾಗ ಘಜ್ವಾ-ಎ-ಹಿಂದ್ ಗೆ ಸಂಬಂಧಿಸಿದ ಕಾಗದಗಳು ಬರಾಮತ್ತಾಗಿದ್ದವು, ಇವೆಲ್ಲ ಸಂಗತಿಗಳನ್ನು ಗಮನಿಸಿದರೆ ಮತ್ತೊಂದು ಸರಣಿ ಬಾಂಬ್ ಸ್ಫೋಟಕ್ಕೆ ಪೂರ್ವ ಸಿದ್ಧತೆ ನಡೆದಿರುವ ಬಗ್ಗೆ ಅನುಮಾನ ಕಾಡದಿರದು ಎಂದು ರವಿ ಹೇಳಿದರು.

ಚಿಕ್ಕಮಗಳೂರು: ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟವನ್ನು (Rameshwaram café blast) ಗಮನಿಸಿದಾಗ ಹಿಂದೆ ತಮಿಳುನಾಡುನ ಕೊಯಂಬತ್ತೂರ್ ನಗರದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ (serial bomb blast ) ಹಾಗೆ ಕರ್ನಾಟಕದಲ್ಲೂ ನಡೆಸಲು ಪೂರ್ವಭಾವಿ ಸಿದ್ಧತೆಯಂತೆ ಭಾಸವಾಗುತ್ತದೆ ಎಂದು ಹಿರಿಯ ಬಿಜೆಪಿ ನಾಯಕ ಸಿಟಿ ರವಿ (CT Ravi) ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಅವರು ಮತಾಂಧ ಶಕ್ತಿ ಮತ್ತು ಭಯೋತ್ಪಾದಕರು ಕೈಜೋಡಿಸಿರುವ ಬಲವಾದ ಶಂಕೆ ವ್ಯಕ್ತವಾಗುತ್ತಿದೆ ಯಾಕೆಂದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 21 ಶಂಕಿತ ಭಯೋತ್ಪಾದಕರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ ಎಂದು ಹೇಳಿದರು. ಹಿಂದೆ ಜೈನರ ಕಾಶಿ ಎಂದು ಕರೆಸಿಕೊಂಡಿದ್ದ ಭಟ್ಕಳ ಈಗ ಉಗ್ರರ ನೆಲೆಯಾಗಿದೆ. ಸಿಮಿ ಸಂಘಟನೆಯ ಮೇಲೆ ಎನ್ ಐಎ ದಾಳಿ ನಡೆಸಿದಾಗ ಘಜ್ವಾ-ಎ-ಹಿಂದ್ ಗೆ ಸಂಬಂಧಿಸಿದ ಕಾಗದಗಳು ಬರಾಮತ್ತಾಗಿದ್ದವು, ಇವೆಲ್ಲ ಸಂಗತಿಗಳನ್ನು ಗಮನಿಸಿದರೆ ಮತ್ತೊಂದು ಸರಣಿ ಬಾಂಬ್ ಸ್ಫೋಟಕ್ಕೆ ಪೂರ್ವ ಸಿದ್ಧತೆ ನಡೆದಿರುವ ಬಗ್ಗೆ ಅನುಮಾನ ಕಾಡದಿರದು ಎಂದು ರವಿ ಹೇಳಿದರು.

ಬಾಂಬ್ ಸ್ಫೋಟದ ವಿಷಯದಲ್ಲಿ ರಾಜಕೀಯ ಬೇಡ ಅಂತ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಅವರ ಮಾತು ಸರಿ, ಇದು ಜನರ ಸಂರಕ್ಷಣೆಯ ವಿಷಯವಾಗಿರುವುದರಿಂದ ರಾಜಕೀಯ ಮಾಡೋದು ಸರಿಯಲ್ಲ, ಆದರೆ ಮುಖ್ಯಮಂತ್ರಿಯವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಇಟ್ಟಿಕೊಳ್ಳುವುದು ಬೇಡ ಅಂತಲೂ ಹೇಳಲಿ, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಕೋರರನ್ನ ಡಿಕೆ ಶಿವಕುಮಾರ್ ಬ್ರದರ್ಸ್ ಅನ್ನುತ್ತಾರೆ ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕುಂಕುಮ ಬೇಡ ಎನ್ನುವ ಇವರು ಹಿಂದೂನಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More