ಇಳಕಲ್​​ನಲ್ಲಿ ದಾಖಲೆಯ ಅಡ್ಡಪಲ್ಲಕ್ಕಿ ಮಹೋತ್ಸವ: ನಿರಂತರ 33 ಗಂಟೆ ಮೆರವಣಿಗೆ

Edited By:

Updated on: Sep 05, 2024 | 2:50 PM

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಚಿತ್ತರಗಿ ವಿಜಯಮಹಾಂತೇಶ್ವರ ಮಠ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವ ಹಾಗೂ ಜಾತ್ರೆ ಹಿನ್ನೆಲೆ ಇಂದು ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ನಿರಂತರ 33 ಗಂಟೆ ಅಡ್ಡಪಲ್ಲಕ್ಕಿ ಮೆರವಣಿಗೆ ನಡೆಯುವ ಮೂಲಕ ದಾಖಲೆ ಮಾಡಲಾಗಿದೆ. ಭಕ್ತರ ಸಂಭ್ರಮಿಸಿದ್ದಾರೆ.

ಬಾಗಲಕೋಟೆ, ಸೆಪ್ಟೆಂಬರ್​ 05: ನಿರಂತರ 33 ಗಂಟೆ ಅಡ್ಡಪಲ್ಲಕ್ಕಿ ಮೆರವಣಿಗೆ (Addapalakki Mahotsava) ಮಾಡುವ ಮೂಲಕ ಜಿಲ್ಲೆಯ ಇಳಕಲ್ ನಗರದಲ್ಲಿ ದಾಖಲೆಯ ಅಡ್ಡಪಲ್ಲಕ್ಕಿ ಮಹೋತ್ಸವ ನೆರವೇರಿಸಲಾಗಿದೆ. ವಿಜಯಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವ ಹಾಗೂ ಜಾತ್ರೆ ಹಿನ್ನೆಲೆ ನಡೆದ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ನಗರದಲ್ಲಿ ಮನೆ ಮನೆಗಳ ಮುಂದೆ ಭಕ್ತರು ಪಲ್ಲಕ್ಕಿ ಪೂಜೆ, ಕಾಯಿ, ಕರ್ಪೂರ ಬೆಳಗಿದ್ದಾರೆ. ಕೇವಲ 1.5 ಕಿ.ಮೀ. ಸಾಗಿ ಮರಳಿ ವಿಜಯಮಹಾಂತೇಶ ಮಠ ತಲುಪಲು 33 ಗಂಟೆ ತೆಗೆದುಕೊಂಡಿದೆ. ಭಕ್ತರ ಸಂಭ್ರಮ, ವಾದ್ಯವೈಭವಗಳ ಜೊತೆ ಅಡ್ಡಪಲ್ಲಕ್ಕಿ ಮೆರವಣಿಗೆ ಸಾಗಿತ್ತು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More