Abbi Falls: ನೀರಿಗಿಳಿಯದಂತೆ ಸೂಚನಾ ಫಲಕ ಇದ್ದರೂ ಡೋಂಟ್ ಕೇರ್, ಅಬ್ಬಿ ಫಾಲ್ಸ್ನಲ್ಲಿ ಪ್ರವಾಸಿಗರ ಹುಚ್ಚಾಟ
ಜಿಲ್ಲೆಯ ಮಲೆನಾಡು ಭಾಗದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅಬ್ಬಿ ಜಲಪಾತ ತುಂಬಿ ಹರಿಯುತ್ತಿದೆ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದರೂ, ಸುರಕ್ಷತಾ ನಿಯಮಗಳ ನಿರ್ಲಕ್ಷ್ಯ ಆತಂಕಕ್ಕೆ ಕಾರಣವಾಗಿದೆ. ಸಕಲೇಶಪುರ ತಾಲ್ಲೂಕಿನ ಹಾನ್ಬಾಳ್ ಬಳಿಯ ಅಬ್ಬಿ ಜಲಪಾತದಲ್ಲಿ ನೀರಿಗಿಳಿಯದಂತೆ ಸೂಚನಾ ಫಲಕಗಳಿದ್ದರೂ, ಪ್ರವಾಸಿಗರು ಅವುಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ.
ಹಾಸನ, ಜುಲೈ 14: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅಬ್ಬಿ ಜಲಪಾತ ತುಂಬಿ ಹರಿಯುತ್ತಿದೆ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದರೂ, ಸುರಕ್ಷತಾ ನಿಯಮಗಳ ನಿರ್ಲಕ್ಷ್ಯ ಆತಂಕಕ್ಕೆ ಕಾರಣವಾಗಿದೆ. ಸಕಲೇಶಪುರ ತಾಲ್ಲೂಕಿನ ಹಾನ್ಬಾಳ್ ಬಳಿಯ ಅಬ್ಬಿ ಜಲಪಾತದಲ್ಲಿ ನೀರಿಗಿಳಿಯದಂತೆ ಸೂಚನಾ ಫಲಕಗಳಿದ್ದರೂ, ಪ್ರವಾಸಿಗರು ಅವುಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ.
ಜಲಪಾತದ ನೀರಿಗೆ ಇಳಿದು ಆಟವಾಡುವುದು, ಈಜುವುದು ಸಾಮಾನ್ಯವಾಗಿದೆ. ಯುವಕರು, ಕುಟುಂಬ ಸಮೇತ ಜಲಪಾತದ ಮಧ್ಯದಲ್ಲಿ ನಿಂತು ರೀಲ್ಸ್ ಹಾಗೂ ಫೋಟೋ ತೆಗೆಸಿಕೊಳ್ಳುವಲ್ಲಿ ಮಗ್ನರಾಗಿದ್ದಾರೆ. ಆದರೆ, ಈ ರೀತಿಯ ಹುಚ್ಚಾಟ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕೇವಲ ಒಂದು ವಾರದ ಹಿಂದೆ ಕೊಡಗು ಜಿಲ್ಲೆಯ ಮಲ್ಲಳ್ಳಿ ಫಾಲ್ಸ್ನಲ್ಲಿ ನೀರಿನ ರಭಸ ಹೆಚ್ಚಾಗಿ ಇಬ್ಬರು ಯುವಕರು ಸಿಲುಕಿಕೊಂಡ ಘಟನೆ ನಡೆದಿದೆ. ಇಂತಹ ಮಳೆಗಾಲದಲ್ಲಿ ಯಾವುದೇ ಕ್ಷಣದಲ್ಲಿ ನೀರಿನ ಹರಿವು ಹೆಚ್ಚಾಗಬಹುದು, ಇದು ಅನಾಹುತಕ್ಕೆ ಕಾರಣವಾಗಬಹುದು.ತಾಲ್ಲೂಕು ಆಡಳಿತ ಮುಂದಿನ ಆದೇಶದವರೆಗೆ ನಿರ್ಬಂಧ ವಿಧಿಸಿದ್ದರೂ, ಪ್ರವಾಸಿಗರು ಈ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಸ್ಥಳೀಯರು ಇಂತಹ ಅಪಾಯಕಾರಿ ವರ್ತನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ಆಗ್ರಹಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
