Assembly Session; ಅಕ್ರಮ ರೆವೆನ್ಯೂ ಬಡಾವಣೆಗಳನ್ನು ತಡೆಗಟ್ಟಲು ಹಿಂದಿನ ಸರ್ಕಾರ ಜಾರಿಗೊಳಿಸಿದ ನಿಯಮ ಸಮರ್ಪಕವಾಗಿದೆ: ಕೃಷ್ಣ ಭೈರೇಗೌಡ

Updated on: Jul 10, 2023 | 3:58 PM

ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವಿಸುವುದಿಲ್ಲ, ನಿಯಮಗಳು ಸರಿಯಾಗಿದ್ದರೆ ನಮ್ಮ ಸರ್ಕಾರ ಅವುಗಳನ್ನು ಮುಂದುವರಿಸುತ್ತದೆ ಎಂದು ಸಚಿವ ಹೇಳಿದರು.

ಬೆಂಗಳೂರು: ಅನಧಿಕೃತ ರೆವೆನ್ಯೂ ಬಡಾವಣೆಗಳ (illegal Revenue Layouts) ಧಂದೆ ಅವ್ಯಾಹವಾಗಿ ನಡೆಯುತ್ತಿರುವುದನ್ನು ತಡೆಯಲು ಹಿಂದಿನ ಸರ್ಕಾರ 2021 ರಲ್ಲಿ ಜಾರಿಗೊಳಿಸಿದ ನಿಯಮ ಬಹಳ ಉಪಯೋಗಕಾರಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಸಮರ್ಥನೆ ಮಾಡಿಕೊಂಡರು. ಸದನದಲ್ಲಿಂದು (the House) ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಭೈರೇಗೌಡ ಅನಧಿಕೃತ ಕಂದಾಯ ಬಡಾವಣೆಗಳು ತಲೆಯೆತ್ತುವುದನ್ನು ತಡೆಯಲು ಒಬ್ಬ ವ್ಯಕ್ತಿ ಮತ್ತೊಬ್ಬನಿಗೆ ಜಾಗ ಮಾರಾಟ ಮಾಡಲು ಬಯಸಿದಲ್ಲಿ ಅವನು ಮಾರುವ ಜಾಗ ಕನಿಷ್ಟ 5 ಗುಂಟೆ ಇರಬೇಕು ಇಲ್ಲವೇ ಅದಕ್ಕಿಂತ ಜಾಸ್ತಿ ಇರಬೇಕು ಅಂತ ಜಾರಿಗೊಳಿಸಿರುವ ನಿಯಮ ಸಮರ್ಪಕವಾಗಿದೆ ಎಂದರು. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವಿಸುವುದಿಲ್ಲ, ನಿಯಮಗಳು ಸರಿಯಾಗಿದ್ದರೆ ನಮ್ಮ ಸರ್ಕಾರ ಅವುಗಳನ್ನು ಮುಂದುವರಿಸುತ್ತದೆ ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More