ತುಂಗಭದ್ರಾ ಜಲಾಶಯದಿಂದ ನೀರು ಹೊರಬಿಡುವ ಕಾರ್ಯ ಆರಂಭ, ಪ್ರವಾಹದ ಭೀತಿಯಲ್ಲಿ ಜನ

ಸುಮಾರು 60 ಟಿಎಂಸಿ ನೀರು ಜಲಾಶಯದಿಂದ ಹೊರಗೆ ಬಿಡುತ್ತಿರುವುದರಿಂದ ರೈತರಿಗೆ ದೊಡ್ಡ ಸಮಸ್ಯೆ ಎದುರಾಗಲಿದೆ. ಕೇವಲ ಒಂದು ಬೆಳೆಗೆ ಮಾತ್ರ ನೀರು ಸಿಗಲಿದೆಯಂತೆ. ಒಂದು ಬೆಳೆ, ಕೈಗಾರಿಕೆ ಮತ್ತು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ನೀರು ಉಳಿಯಲಿದೆಯೆಂದು ವರದಿಗಾರ ಹೇಳುತ್ತಾರೆ. ಮಳೆ ಕಡಿಮೆಯಾಗಿರುವುದರಿಂದ ಜಲಾಶಯ ಪುನಃ ಭರ್ತಿಯಾಗುವುದು ಕಷ್ಟಸಾಧ್ಯ.

ತುಂಗಭದ್ರಾ ಜಲಾಶಯದಿಂದ ನೀರು ಹೊರಬಿಡುವ ಕಾರ್ಯ ಆರಂಭ, ಪ್ರವಾಹದ ಭೀತಿಯಲ್ಲಿ ಜನ
|

Updated on: Aug 13, 2024 | 11:32 AM

ಹೊಸಪೇಟೆ: ತುಂಗಭದ್ರಾ ನದಿಪಾತ್ರದ ಜನ ಮತ್ತು ಬೇಸಾಯಕ್ಕಾಗಿ ಟಿಬಿ ಡ್ಯಾಂ ನೀರನ್ನು ಅವಲಂಬಿಸಿರುವ ರೈತಾಪಿ ಸಮುದಾಯ ಸಂಕಷ್ಟಕ್ಕೀಡಾಗಿದ್ದಾರೆ ಅಂತ ಹೇಳಿದರೆ ಅದು ಅಂಡರ್ ಸ್ಟೇಟ್ಮೆಂಟ್ ಆಗುತ್ತದೆ. ಕಳೆದ ಶನಿವಾರ ತುಂಗಭದ್ರಾ ಜಲಾಶಯದ 19 ನೇ ಕ್ರೆಸ್ಟ್ ಗೇಟ್ ನ ಚೇನ್ ಲಿಂಕ್ ಮುರಿದು ಗೇಟ್ ನೀರಲ್ಲಿ ಕೊಚ್ಚಿಕೊಂಡು ಹೋಗಿರುವುದರಿಂದ ಆ ಗೇಟ್ ನಿಂದ ಒಂದೇ ಸಮನೆ ನೀರು ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಮುರಿದು ಹೋಗಿರುವ ಗೇಟನ್ನು ಮರುಜೋಡಣೆ ಮಾಡುವ ಅವಶ್ಯಕತೆ ಎದುರಾಗಿದೆ. ಆದರೆ ಅದನ್ನು ಮಾಡಬೇಕಾದರೆ ಜಲಾಶಯದಲ್ಲಿರುವ ಸುಮಾರು 60 ಟಿಎಂಸಿ ನೀರನ್ನು ನದಿಗಳಿಗೆ ಹರಿಬಿಡಬೇಕು. ನೀರನ್ನು ಹೊರಬಿಡುವ ಕೆಲಸ ಇಂದಿನಿಂದ ಆರಂಭಗೊಂಡಿದ್ದು ಬೆಳಗ್ಗೆ ಸುಮಾರು 1.14 ಲಕ್ಷ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರಕ್ಕೆ ಹರಿಸಲಾಗಿದೆ ಎಂದು ನಮ್ಮ ವಿಜಯನಗರ ವರದಿಗಾರ ಹೇಳುತ್ತಾರೆ. ಹಾಗಾಗಿ, ಕಂಪ್ಲಿ, ಹಂಪಿ ಮತ್ತು ಶಿರಗುಪ್ಪ ಮೊದಲಾದ ಊರುಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ. 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಅದಾಗಲೇ 103 ಟಿಎಂಸಿ ನೀರು ಸಂಗ್ರಹಗೊಂಡಿತ್ತಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ತುಂಗಭದ್ರಾ ಡ್ಯಾಂನಲ್ಲಿ 50 ಟಿಎಂಸಿ ನೀರು ಉಳಿಸಿಕೊಳ್ಳಲು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸೂಚನೆ

Follow us
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು