ಕೊನೆಗೂ ಮಂಗನಾಟಕ್ಕೆ ಬಿತ್ತು ಬ್ರೇಕ್: ಇಡೀ ಊರನ್ನೇ ಭಯಭೀತಿಗೊಳಿಸಿದ್ದ ಕೋತಿ ಲಾಕ್

Edited By:

Updated on: Sep 14, 2025 | 5:14 PM

30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಇಡೀ ಊರನ್ನೇ ಭಯಭೀತಿಗೊಳಿಸಿದ್ದ ಮಂಗನನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಹುಚ್ಚು ಮಂಗವೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಪರಾರಿಯಾಗುತ್ತಿತ್ತು. ಹೀಗೆ ಊರಲ್ಲಿ ಸುಮಾರು 30ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿತ್ತು. ಇದರಿಂದ ಗ್ರಾಮಸ್ಥರು ರೋಸಿ ಹೋಗಿದ್ದು, ಮನೆಬಿಟ್ಟು ಬರಲು ಭಯಗೊಂಡಿದ್ದರು. ಇನ್ನು ಮಂಗನ ಹುಚ್ಛಾಟ ಹೆಚ್ಚಾಗುತ್ತಿದ್ದಂತೆಯೇ ಗ್ರಾಮ ಪಂಚಾಯಿತಿ ವತಿಯಂದ ಸ್ಕೀಕರ್ ಮೂಲಕ ಜಾಗೃತಿ ಮೂಡಿಸಲಾಗಿತ್ತು. ಇದೀಗ ಕೊನೆಗೆ ಗ್ರಾಮಸ್ಥರು ಸೇರಿಕೊಂಡು ಕೋತಿಯನ್ನು ಸರೆಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಬಾಗಲಕೋಟೆ, (ಸೆಪ್ಟೆಂಬರ್ 14): 30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಇಡೀ ಊರನ್ನೇ ಭಯಭೀತಿಗೊಳಿಸಿದ್ದ ಮಂಗನನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಹುಚ್ಚು ಮಂಗವೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಪರಾರಿಯಾಗುತ್ತಿತ್ತು. ಹೀಗೆ ಊರಲ್ಲಿ ಸುಮಾರು 30ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿತ್ತು. ಇದರಿಂದ ಗ್ರಾಮಸ್ಥರು ರೋಸಿ ಹೋಗಿದ್ದು, ಮನೆಬಿಟ್ಟು ಬರಲು ಭಯಗೊಂಡಿದ್ದರು. ಇನ್ನು ಮಂಗನ ಹುಚ್ಛಾಟ ಹೆಚ್ಚಾಗುತ್ತಿದ್ದಂತೆಯೇ ಗ್ರಾಮ ಪಂಚಾಯಿತಿ ವತಿಯಂದ ಸ್ಕೀಕರ್ ಮೂಲಕ ಜಾಗೃತಿ ಮೂಡಿಸಲಾಗಿತ್ತು. ಇದೀಗ ಕೊನೆಗೆ ಗ್ರಾಮಸ್ಥರು ಸೇರಿಕೊಂಡು ಕೋತಿಯನ್ನು ಸರೆಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More