ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್; ಬಂಧಿತರ ಸಂಖ್ಯೆ 19ಕ್ಕೆ ಏರಿಕೆ

Updated on: Jun 17, 2024 | 6:56 AM

ಶೆಡ್​​ನಲ್ಲಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್​ ನೀಡೋ ಪ್ಲ್ಯಾನ್​​ ಮಾಡಲಾಗಿದೆ. ಮೆಗ್ಗರ್ ಮಷಿನ್ ಬಳಸಿ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದೆ. ಪ್ರಕರಣ ಬಯಲಾಗುತ್ತಿದ್ದಂತೆ ರಾಜು ತಲೆಮರಿಸಿಕೊಂಡಿದ್ದ. ಈತ ಮಂಡ್ಯ ಮೂಲದವನಾಗಿದ್ದು, ಪ್ರಕರಣದಲ್ಲಿ 9ನೇ ಆರೋಪಿಯಾಗಿ ಮಾಡಲಾಗಿದೆ.

ರೇಣುಕಾ ಸ್ವಾಮಿ (Renuka Swami) ಮರಣೋತ್ತರ ಪರೀಕ್ಷೆಯ ವರದಿ ನಿಜಕ್ಕೂ ಶಾಕಿಂಗ್ ಆಗಿತ್ತು. ರೇಣುಕಾ ಸ್ವಾಮಿ ಅನುಭವಿಸಿದ ಚಿತ್ರ ಹಿಂಸೆಯ ವಿವರ ಈ ವರದಿಯಲ್ಲಿ ಇತ್ತು. ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೂಡ ನೀಡಲಾಗಿತ್ತು. ಇದರ ಮಾಸ್ಟರ್​ಮೈಂಡ್ ರಾಜು ಅಲಿಯಾಸ್ ಧನರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 19 ಆರೋಪಿಗಳ ಬಂಧನ ಆಗಿದೆ. A5 ಆರೋಪಿ ನಂದೀಶ್ ಜೊತೆ ಬೆಂಗಳೂರಲ್ಲಿ ರಾಜು ಕೇಬಲ್ ಕೆಲಸ ಮಾಡುತ್ತಿದ್ದ. ಎಲೆಕ್ಟ್ರಿಕಲ್ ಮೆಗ್ಗರ್ ಬಗ್ಗೆ ನಂದೀಶ್, ರಾಜು ತಿಳಿದುಕೊಂಡಿದ್ದರು. ಘಟನೆಯ ದಿನ ರಾಜುನ ನಂದೀಶ್​​ ಶೆಡ್​ಗೆ ಕರೆಸಿಕೊಂಡಿದ್ದ. ಜೊತೆಗೆ ಎಲೆಕ್ಟ್ರಿಕಲ್ ಮೆಗ್ಗರ್ ಮಷಿನ್ ಕೂಡ ತರಿಸಿಕೊಳ್ಳಲಾಗಿದೆ. ಶೆಡ್​​ನಲ್ಲಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್​ ನೀಡೋ ಪ್ಲ್ಯಾನ್​​ ಮಾಡಲಾಗಿದೆ. ಮೆಗ್ಗರ್ ಮಷಿನ್ ಬಳಸಿ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದೆ. ಪ್ರಕರಣ ಬಯಲಾಗುತ್ತಿದ್ದಂತೆ ರಾಜು ತಲೆಮರಿಸಿಕೊಂಡಿದ್ದ. ಈತ ಮಂಡ್ಯ ಮೂಲದವನಾಗಿದ್ದು, ಪ್ರಕರಣದಲ್ಲಿ 9ನೇ ಆರೋಪಿಯಾಗಿ ಮಾಡಲಾಗಿದೆ. ವಿಚಾರಣೆ ವೇಳೆ‌ ರಾಜು ಸಂಪೂರ್ಣ ವಿಚಾರ ಬಾಯ್ಬಿಟ್ಟಿದ್ದಾರೆ. ಪೊಲೀಸರು ಎಲೆಕ್ಟ್ರಿಕಲ್ ಮೆಗ್ಗರ್ ಮಷಿನ್‌ ಕೂಡಾ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More