ಆರೋಪ ಮಾಡುವ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ

Edited By:

Updated on: Jul 03, 2024 | 7:22 PM

ಪವಿತ್ರಾ ಗೌಡ ಮಾತ್ರವಲ್ಲದೇ ಅನೇಕ ನಟಿಯರಿಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಆರೋಪ ಎದುರಾಗಿದೆ. ಈ ಕುರಿತು ಕೆಲವು ನಟಿಯರು ಈಗ ಬಾಯಿಬಿಟ್ಟಿದ್ದಾರೆ. ಅಂತಹ ಆರೋಪಗಳಿಗೆ ರೇಣುಕಾ ಸ್ವಾಮಿ ಅವರ ತಂದೆ ಕಾಶೀನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ನಟಿಯರೆಲ್ಲ ಇಷ್ಟು ದಿನ ಯಾಕೆ ಸುಮ್ಮನಿದ್ದರು ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ನಟ ದರ್ಶನ್​, ನಟಿ ಪವಿತ್ರಾ ಗೌಡ ಹಾಗೂ ಅವರ ಸಹಚರರು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಇದೆ. ಈ ಘಟನೆಯ ಹಿಂದೆ ಇರುವುದು ಒಂದು ಅಶ್ಲೀಲ ಮೆಸೇಜ್​ ಎನ್ನಲಾಗಿದೆ. ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದರಿಂದಲೇ ಇಷ್ಟೆಲ್ಲ ಆಗಿದೆ ಎಂಬುದು ಸದ್ಯದ ಮಾಹಿತಿ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ರೇಣುಕಾ ಸ್ವಾಮಿಯ ನಕಲಿ ಸೋಶಿಯಲ್​ ಮೀಡಿಯಾ ಖಾತೆಯಿಂದ ನಮಗೂ ಕೆಟ್ಟ ಮೆಸೇಜ್​ ಬಂದಿತ್ತು ಎಂದು ಕೆಲವು ನಟಿಯರು ಈಗ ಬಾಯಿಬಿಟ್ಟಿದ್ದಾರೆ. ಆ ಕುರಿತು ರೇಣುಕಾ ಸ್ವಾಮಿ ತಂದೆ ಕಾಶೀನಾಥಯ್ಯ ಮಾತನಾಡಿದ್ದಾರೆ. ‘ಅಂಥವರ ಆರೋಪಕ್ಕೆ ಈಗ ಏನು ಹೇಳೋದು? ಒಂದು ವೇಳೆ ಆ ರೀತಿ ಇದ್ದಿದ್ದರೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಬಹುದಿತ್ತು. ಈಗ ಏನೇನೋ ಹೇಳಿದರೆ ನಾವು ಅದರ ಬಗ್ಗೆ ಮಾತನಾಡಲು ತಯಾರಿಲ್ಲ. ಈಗ ಯಾಕೆ ಆರೋಪ ಮಾಡುತ್ತಿದ್ದಾರೆ ಎಂಬುದು ಅವರಿಗೇ ಗೊತ್ತು. ಬೇಕಿದ್ದರೆ ಈಗಲೂ ದೂರು ನೀಡಲಿ. ಪೊಲೀಸರು, ಸರ್ಕಾರದ ಮೇಲೆ ನಮಗೆ ನಂಬಿಕೆ ಇದೆ’ ಎಂದು ಕಾಶೀನಾಥಯ್ಯ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More