ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಠಾಣೆಯಿಂದ ಆಸ್ಪತ್ರೆಗೆ ಶಿಫ್ಟ್​

ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಠಾಣೆಯಿಂದ ಆಸ್ಪತ್ರೆಗೆ ಶಿಫ್ಟ್​
|

Updated on: Jun 18, 2024 | 5:58 PM

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂದು (ಜೂ.18) ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಪೊಲೀಸ್​ ಠಾಣೆಗೆ ವೈದ್ಯರನ್ನು ಕರೆಸಲಾಯಿತು. ನಂತರ ಪವಿತ್ರಾ ಗೌಡ ಅವರನ್ನು ಪೊಲೀಸ್​ ಠಾಣೆಯಿಂದ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ದರ್ಶನ್​ ಸ್ನೇಹಿತೆ, ನಟಿ ಪವಿತ್ರಾ ಗೌಡ (Pavithra Gowda) ಕಳೆದ ಕೆಲವು ದಿನಗಳಿಂದ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆರೋಪಿ. ಪ್ರತಿ ದಿನವೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗುತ್ತಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು ಆಗಿದೆ. ಇಂದು (ಜೂನ್​ 18) ಪೊಲೀಸ್​ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಬಳಿಕ ಪವಿತ್ರಾ ಗೌಡ ಅವರನ್ನು ಪೊಲೀಸ್​ ಸ್ಟೇಷನ್​ನಿಂದ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಪವಿತ್ರಾ ಗೌಡ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ. ಆತನಿಗೆ ಪಾಠ ಕಲಿಸಲು ದರ್ಶನ್​ ಮತ್ತು ಸಹಚರರು ರೇಣುಕಾ ಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ದರ್ಶನ್​ (Darshan) ಎ2 ಆಗಿದ್ದಾರೆ. ಎಲ್ಲ ಪ್ರಮುಖ ಆರೋಪಿಗಳು ಈಗ ಪೊಲೀಸರ ವಶದಲ್ಲಿದ್ದಾರೆ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಹಾಗೂ ರೇಣುಕಾ ಸ್ವಾಮಿ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಒತ್ತಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ