ಹೃದಯಾಘಾತಕ್ಕೂ ಮುನ್ನ ಆರೋಪಿ ಅನು ತಂದೆ ಚಂದ್ರಣ್ಣ ಕೊನೆಯ ಮಾತು

Edited By:

Updated on: Jun 14, 2024 | 9:16 PM

‘ನನ್ನ ಮಗ ಅಂಥವನಲ್ಲ. ಈಗ ಅವನ ಎಲ್ಲಿದ್ದಾನೆ ಅಂತಲೂ ನಮಗೆ ಗೊತ್ತಿಲ್ಲ. ಅವರನ್ನು ಕರೆದುಕೊಂಡು ಹೋಗಿದ್ದಾರೆ’ ಎಂದು ಅನು ತಂದೆ ಚಂದಣ್ಣ ಹೇಳಿದ್ದರು. ಮಗನ ಬಂಧನದಿಂದ ಅವರು ಮನನೊಂದಿದ್ದರು. ಈಗ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ. ಪವಿತ್ರಾ ಗೌಡ ಹಾಗೂ ರೇಣುಕಾ ಸ್ವಾಮಿ ನಡುವಿನ ವೈಯಕ್ತಿಕ ಗಲಾಟೆಯಿಂದ ಹಲವು ಕುಟುಂಬಗಳು ಕಣ್ಣೀರು ಹಾಕುವಂತಾಗಿದೆ.

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡ (Pavithra Gowda) ವೈಯಕ್ತಿಕ ವಿಚಾರಕ್ಕೆ ಕಾರಣವಾದ ಕಿರಿಕ್​ ಒಂದು ಕೊಲೆಯಲ್ಲಿ ಅಂತ್ಯವಾಯಿತು. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಹತ್ಯೆಯಿಂದಾಗಿ ಅನೇಕ ಕುಟುಂಬಗಳು ಕಣ್ಣೀರು ಹಾಕುತ್ತಿವೆ. ಈ ಕೃತ್ಯದಲ್ಲಿ 17ಕ್ಕೂ ಅಧಿಕ ಜನರು ಭಾಗಿ ಆಗಿರುವ ಶಂಕೆ ಇದೆ. ಆದರೆ ಈ ಬಗ್ಗೆ ಕಿಂಚಿತ್ತೂ ಮಾಹಿತಿ ಇಲ್ಲದ ಕುಟುಂಬದ ಸದಸ್ಯರು ನೋವು ಅನುಭವಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಹತ್ಯೆಯ ಆರೋಪಿಗಳಲ್ಲಿ ಒಬ್ಬನಾದ ಅನು ಇಂದು (ಜೂನ್​ 14) ಅರೆಸ್ಟ್​ ಆಗಿದ್ದಾನೆ. ದುರಂತ ಏನೆಂದರೆ ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಗನ ಬಂಧನದಿಂದ ಮನನೊಂದಿದ್ದ ಚಂದ್ರಣ್ಣ ಅವರಿಗೆ ಹೃದಯಾಘಾತ (Heart Attack) ಆಗಿದೆ. ಆದರೆ ಸಾಯುವುದಕ್ಕೂ ಕೆಲವೇ ಗಂಟೆಗಳ ಮುನ್ನ ‘ಟಿವಿ9 ಕನ್ನಡ’ ಜೊತೆ ಚಂದ್ರಣ್ಣ ಮಾತನಾಡಿದ್ದರು. ‘ನನ್ನ ಮಗ ಅಂಥವನಲ್ಲ. ನಾನು ತಿಳಿದಿದ್ದನ್ನು ಹೇಳುತ್ತಿದ್ದೇನೆ. ಈ ಹಟ್ಟಿಯಲ್ಲಿ ಬೆಳೆದವನು ಅವನು. ಯಾರನ್ನು ಬೇಕಿದ್ದರೂ ಕೇಳಿ. ಏನಾದರೂ ತಪ್ಪಿದ್ದರೆ ನೀವೇ ಹೇಳಿ. ಅವನ ಈಗ ಎಲ್ಲಿ ಇದ್ದಾನೆ ಅಂತಲೂ ಗೊತ್ತಿಲ್ಲ. ಅವರನ್ನು ಕರೆದುಕೊಂಡು ಹೋಗಿದ್ದಾರೆ’ ಎಂದು ಚಂದಣ್ಣ ನೋವಿನಿಂದ ಮಾತನಾಡಿದ್ದರು. ಆದರೆ ಈಗ ಅವರ ಸಾವಿನ ಸುದ್ದಿ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More