ಎಷ್ಟೇ ಪ್ರಯತ್ನಿಸಿದರೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವುದು ದರ್ಶನ್ಗೆ ಕಷ್ಟವಾಗಿದೆ. ಕೊಲೆ ನಡೆದ ಬಳಿಕ ಸಾಕ್ಷಿ ನಾಶಕ್ಕೆ ಪ್ರಯತ್ನ ನಡೆದಿತ್ತು. ಆದರೆ ಪೊಲೀಸರು ವಶಪಡಿಸಿಕೊಂಡ ವಸ್ತುಗಳಿಂದ ಮಹತ್ವದ ಮಾಹಿತಿ ಸಿಗುತ್ತಿದೆ. ಕೊಲೆ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆಗಳಲ್ಲಿ ಸಿಕ್ಕಿರುವ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಈಗ ಎಫ್ಎಸ್ಎಲ್ ವರದಿಯಲ್ಲಿ ಪತ್ತೆ ಆಗಿದೆ. ಇನ್ನೂ ಹಲವು ವರದಿಗಳು ಹೈದರಾಬಾದ್ನಿಂದ ಬರಬೇಕಿದೆ. ಕೆಲವೇ ದಿನಗಳಲ್ಲಿ ಆ ಮಾಹಿತಿಗಳು ಕೂಡ ಪೊಲೀಸರಿಗೆ ಸಿಗಲಿವೆ. ಮುಂದಿನ ತಿಂಗಳು ಚಾರ್ಚ್ಶೀಟ್ ಸಲ್ಲಿಸುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಆದಷ್ಟ ಬೇಗ ಶಿಕ್ಷೆ ಕೊಡಿಸಲು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.