ಎಫ್​ಎಸ್​ಎಲ್​ ವರದಿ: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್​ ವಿರುದ್ಧ ಇದು ಪಕ್ಕಾ ಸಾಕ್ಷಿ

| Updated By: ಮದನ್​ ಕುಮಾರ್​

Updated on: Aug 07, 2024 | 9:20 PM

ರೇಣುಕಾ ಸ್ವಾಮಿಯ ಹತ್ಯೆ ನಡೆದ ಬಳಿಕ ಪಟ್ಟಣಗೆರೆ ಶೆಡ್​ನಿಂದ ನೇರವಾಗಿ ಮನೆಗೆ ಬಂದಿದ್ದ ದರ್ಶನ್​ ಬಟ್ಟೆಯನ್ನು ಮನೆಯಲ್ಲಿ ಇಟ್ಟಿದ್ದರು. ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದೇ ಬಟ್ಟೆಯಲ್ಲಿ ರೇಣುಕಾ ಸ್ವಾಮಿಯ ರಕ್ತ ಇತ್ತು ಎಂಬುದು ಖಚಿತವಾಗಿದೆ. ಇಂತಹ ಅನೇಕ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ. ಚಾರ್ಜ್​ಶೀಟ್​ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಎಷ್ಟೇ ಪ್ರಯತ್ನಿಸಿದರೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವುದು ದರ್ಶನ್​ಗೆ ಕಷ್ಟವಾಗಿದೆ. ಕೊಲೆ ನಡೆದ ಬಳಿಕ ಸಾಕ್ಷಿ ನಾಶಕ್ಕೆ ಪ್ರಯತ್ನ ನಡೆದಿತ್ತು. ಆದರೆ ಪೊಲೀಸರು ವಶಪಡಿಸಿಕೊಂಡ ವಸ್ತುಗಳಿಂದ ಮಹತ್ವದ ಮಾಹಿತಿ ಸಿಗುತ್ತಿದೆ. ಕೊಲೆ ನಡೆದ ದಿನ ದರ್ಶನ್​ ಧರಿಸಿದ್ದ ಬಟ್ಟೆಗಳಲ್ಲಿ ಸಿಕ್ಕಿರುವ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಈಗ ಎಫ್​ಎಸ್​ಎಲ್​ ವರದಿಯಲ್ಲಿ ಪತ್ತೆ ಆಗಿದೆ. ಇನ್ನೂ ಹಲವು ವರದಿಗಳು ಹೈದರಾಬಾದ್​ನಿಂದ ಬರಬೇಕಿದೆ. ಕೆಲವೇ ದಿನಗಳಲ್ಲಿ ಆ ಮಾಹಿತಿಗಳು ಕೂಡ ಪೊಲೀಸರಿಗೆ ಸಿಗಲಿವೆ. ಮುಂದಿನ ತಿಂಗಳು ಚಾರ್ಚ್​ಶೀಟ್​ ಸಲ್ಲಿಸುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಆದಷ್ಟ ಬೇಗ ಶಿಕ್ಷೆ ಕೊಡಿಸಲು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on