ದರ್ಶನ್​ ನೋಡಿ ಬೇರೆ ಭಾಷೆಯವರು ನಗುತ್ತಿದ್ದಾರಾ? ಕರಿ ಸುಬ್ಬು ಹೇಳಿದ್ದಿಷ್ಟು..

ದರ್ಶನ್​ ನೋಡಿ ಬೇರೆ ಭಾಷೆಯವರು ನಗುತ್ತಿದ್ದಾರಾ? ಕರಿ ಸುಬ್ಬು ಹೇಳಿದ್ದಿಷ್ಟು..
| Updated By: ಮದನ್​ ಕುಮಾರ್​

Updated on: Jul 09, 2024 | 10:50 PM

ನಟ ದರ್ಶನ್​ ಜೈಲು ಸೇರಿದ್ದರಿಂದ ಕನ್ನಡ ಚಿತ್ರರಂಗಕ್ಕೆ ಒಂದು ಕಪ್ಪು ಚುಕ್ಕಿ ಆಗಿದೆ. ಇದರ ಬಗ್ಗೆ ನಿರ್ಮಾಪಕ ಕರಿ ಸುಬ್ಬು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯಿಂದ ಪರಭಾಷೆಯ ಮಂದಿ ನಗುತ್ತಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಇದರಿಂದಾಗಿ ಸ್ಯಾಂಡಲ್​ವುಡ್​ ಮಂದಿಗೆ ಬೇಸರ ಇದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿದ್ದಾರೆ.

ಸ್ಟಾರ್ ಆಗಿ ಮಿಂಚುತ್ತಿದ್ದ ನಟ ದರ್ಶನ್​ ಅವರು ಜೈಲಿನಲ್ಲಿ ಕಾಲ ಕಳೆಯುವಂತಹ ಪರಿಸ್ಥಿತಿ ಬಂದಿದೆ. ಇದರ ಬಗ್ಗೆ ಹಿರಿಯ ನಿರ್ಮಾಪಕ ಕರಿ ಸುಬ್ಬು ಮಾತನಾಡಿದ್ದಾರೆ. ಇತ್ತೀಚೆಗೆ ಸಾ.ರಾ. ಗೋವಿಂದು ಅವರ ಬಳಿ ಪರಭಾಷೆಯ ಕೆಲವರು ಬಂದು ದರ್ಶನ್​ ವಿಚಾರ ಪ್ರಸ್ತಾಪಿಸಿ ನಗುತ್ತಿದ್ದರು ಎಂಬ ಮಾಹಿತಿ ಇದೆ. ಇದಕ್ಕೆ ಕರಿ ಸುಬ್ಬು ಪ್ರತಿಕ್ರಿಯಿಸಿದ್ದಾರೆ. ‘ಸಾ.ರಾ. ಗೋವಿಂದು ಅವರು ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋದಾಗ ಅಲ್ಲಿ ಈ ಮಾತು ಬಂದಿರಬಹುದು. ಈ ರೀತಿ ಆಗುತ್ತದೆ. ಈ ಹಿಂದೆ ಕನ್ನಡದಲ್ಲಿ ಅಭಿನಯಿಸಿದ ನಟಿಯೊಬ್ಬರು ಕೊಲೆ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಆಗ ಚಿತ್ರರಂಗಕ್ಕೆ ಕಳಂಕ ಬರಲಿಲ್ಲವೇ? ಈ ರೀತಿ ತುಂಬಾ ಪ್ರಕರಣ ಆಗಿದೆ. ಈಗ ನಡೆದು ಹೋಗಿದೆ. ದರ್ಶನ್​ ಕೂಡ ಮೌನಿ ಆಗಿದ್ದಾರೆ. ವಿಚಾರಣೆ ನಡೆಯುತ್ತಿರುವಾಗ ನಾನು ಮಾತನಾಡುವುದು ಸರಿಯಲ್ಲ’ ಎಂದು ಕರಿ ಸುಬ್ಬು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ