‘ದರ್ಶನ್​ ಒಳ್ಳೆ ವ್ಯಕ್ತಿ, ಜೊತೆಗಾರರಿಂದ ಏನೋ ಮೋಸ ನಡೆದಿದೆ’: ನಿರ್ಮಾಪಕ ಶ್ರೀನಿವಾಸ್​

‘90 ದಿನ ಆದ್ಮೇಲೆ ದರ್ಶನ್​ ಬರುತ್ತಾರೆ. ಶೂಟಿಂಗ್​ಗೆ ಹೋಗುತ್ತಾರೆ. ನೀವೆಲ್ಲ ಅದನ್ನು ನೋಡಿತ್ತೀರಿ. ನಾವೆಲ್ಲ ಸಿನಿಮಾ ಮಾಡುತ್ತೇವೆ. ಅವರ ಡೇಟ್​ ನಮ್ಮ ಬಳಿ ಇದೆ. ಅವರನ್ನು ಮೇಲಕ್ಕೆ ಎತ್ತಬೇಕು ಎಂಬುದೇ ನಮ್ಮ ಆಸೆ’ ಎಂದು ಖ್ಯಾತ ನಿರ್ಮಾಪಕ ಶ್ರೀನಿವಾಸ್​ ಹೇಳಿದ್ದಾರೆ. ದರ್ಶನ್​ ಜೊತೆಗಿನ ತಮ್ಮ ಒಡನಾಟದ ಬಗ್ಗೆ ಅವರು ಮಾತನಾಡಿದ್ದಾರೆ.

‘ದರ್ಶನ್​ ಒಳ್ಳೆ ವ್ಯಕ್ತಿ, ಜೊತೆಗಾರರಿಂದ ಏನೋ ಮೋಸ ನಡೆದಿದೆ’: ನಿರ್ಮಾಪಕ ಶ್ರೀನಿವಾಸ್​
|

Updated on: Jun 21, 2024 | 7:05 PM

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ನಟ ದರ್ಶನ್​ (Darshan) ಸಂಕಷ್ಟ ಎದುರಿಸುತ್ತಿದ್ದಾರೆ. ಸದ್ಯ ಪೊಲೀಸ್​ ಕಸ್ಟಡಿಯಲ್ಲಿ ಇರುವ ಅವರ ಬಗ್ಗೆ ಕನ್ನಡ ಚಿತ್ರರಂಗದ ಅನೇಕರು ಮಾತನಾಡಿದ್ದಾರೆ. ದರ್ಶನ್​ ವ್ಯಕ್ತಿತ್ವದ ಬಗ್ಗೆ ನಿರ್ಮಾಪಕ ಶ್ರೀನಿವಾಸ್​ (Producer Srinivas) ಈಗ ಅನಿಸಿಕೆ ತಿಳಿಸಿದ್ದಾರೆ. ‘ದರ್ಶನ್​ ಜೊತೆ ನಾನು 20 ವರ್ಷದಿಂದ ಜರ್ನಿ ಮಾಡುತ್ತಾ ಇದ್ದೇನೆ. ಅವರು ತುಂಬ ಒಳ್ಳೆಯ ವ್ಯಕ್ತಿ. ಸಹವಾಸದಿಂದ ಸನ್ಯಾಸಿ ಕೆಟ್ಟ ಅಂತ ನಮ್ಮ ಹಳ್ಳಿಯಲ್ಲಿ ಹೇಳುತ್ತಾರೆ. ಆ ರೀತಿ, ಸುತ್ತಲೂ ಇರುವ ಜನರಿಂದ ದರ್ಶನ್ ಕೆಟ್ಟಿದ್ದಾರೆ. ಅವರ ಹೃದಯ ತುಂಬ ಒಳ್ಳೆಯದು. ಎಷ್ಟೋ ಸಲ ನಾನು ಅವರ ತೋಟಕ್ಕೆ ಹೋಗಿ ಊಟ ಮಾಡಿದ್ದೇನೆ. ಅವರ ಮನೆಗೆ ಹೋಗಿದ್ದೇನೆ. ಅಂಥವರು ಈ ರೀತಿ ಮಾಡಿದ್ದಾರೆ ಎಂದರೆ ಜೊತೆಯಲ್ಲಿ ಇರುವವರಿಂದ ಏನೋ ಮೋಸ ನಡೆದಿದೆ ಅಂತ ನನಗೆ ಅನಿಸುತ್ತದೆ. ದರ್ಶನ್​ ತುಂಬ ಒಳ್ಳೆಯವರು. ಅವರು ಹೊರಗೆ ಬಂದೇ ಬರುತ್ತಾರೆ. ಸಹವಾಸದಿಂದ ಈ ರೀತಿ ಆಗಿದೆ. ನಿರ್ಮಾಪಕರು 150 ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ. ಅವರಿಗೆಲ್ಲ ಅನ್ಯಾಯ ಆಗಬಾರದು. ಕಾನೂನಿನ ಪ್ರಕಾರ ದರ್ಶನ್​ ಅವರನ್ನು ಶೂಟಿಂಗ್​ಗೆ ಕಳಿಸುತ್ತಾರೆ ಎಂಬ ನಂಬಿಕೆ ನನಗಿದೆ’ ಎಂದಿದ್ದಾರೆ ನಿರ್ಮಾಪಕ ಶ್ರೀನಿವಾಸ್​. ಪ್ರಕರಣದ ಎ1 ಆರೋಪಿಯಾದ ಪವಿತ್ರಾ ಗೌಡ (Pavithra Gowda) ಈಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ