ರೇಣುಕಾ ಸ್ವಾಮಿ ಹತ್ಯೆ ಕೇಸ್​; ಕೊಲೆ ಸ್ಪಾಟ್​ನಲ್ಲಿ ಸಿಕ್ತಾ ಸ್ಟ್ರಾಂಗ್​ ಎವಿಡನ್ಸ್​?

|

Updated on: Jun 12, 2024 | 9:24 PM

ರೇಣುಕಾ ಸ್ವಾಮಿ (Renuka Swamy) ಕೊಲೆ ಮಾಡಿ ಆರೋಪದಲ್ಲಿ ನಟ ದರ್ಶನ್ (Darshan), ಪವಿತ್ರಾ ಗೌಡ (Pavitra Gowda) ಸೇರಿ 13 ಜನರ ಬಂಧನವಾಗಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಇಂದು(ಬುಧವಾರ) ಹತ್ಯೆ ನಡೆದ ಬೆಂಗಳೂರಿನ ರಾಜರಾಜೇಶ್ವರಿನಗರದ ಪಟ್ಟಣಗೆರೆ ಶೆಡ್​ಗೆ ಆರೋಪಿಗಳನ್ನು ಕರೆದುಕೊಂಡು ಹೋಗಿ ಪೊಲೀಸರು ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಬೆಂಗಳೂರು, ಜೂ.12: ರೇಣುಕಾ ಸ್ವಾಮಿ (Renuka Swamy) ಕೊಲೆ ಮಾಡಿ ಆರೋಪದಲ್ಲಿ ನಟ ದರ್ಶನ್ (Darshan), ಪವಿತ್ರಾ ಗೌಡ (Pavitra Gowda) ಸೇರಿ 13 ಜನರ ಬಂಧನವಾಗಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಇಂದು(ಬುಧವಾರ) ಹತ್ಯೆ ನಡೆದ ಬೆಂಗಳೂರಿನ ರಾಜರಾಜೇಶ್ವರಿನಗರದ ಪಟ್ಟಣಗೆರೆ ಶೆಡ್​ಗೆ ಆರೋಪಿಗಳನ್ನು ಕರೆದುಕೊಂಡು ಹೋಗಿ ಪೊಲೀಸರು ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ಕೊಲೆಗೈದ ಜಾಗ ಯಾವುದು, ಪಟ್ಟಣಗೆರೆ ಶೆಡ್​ಗೆ ಎಷ್ಟು ಗಂಟೆಗೆ ಬಂದಿದ್ದರು, ರೇಣುಕಾಸ್ವಾಮಿ ಹತ್ಯೆಗೆ ಬಳಸಿದ ವಸ್ತುಗಳು ಯಾವುದು ಎಂದು ಪ್ರತಿಯೊಬ್ಬ ಆರೋಪಿಯಿಂದ ಮಾಹಿತಿ ಪಡೆದು ಹೇಳಿಕೆ ದಾಖಲು ಮಾಡಿಕೊಂಡರು. ಈ ವೇಳೆ ಪೊಲೀಸರಿಗೆ ರಾಡ್​ ಸೇರಿದಂತೆ ಕೆಲ ವಸ್ತುಗಳು ಸಿಕ್ಕಿದ್ದು, ಅದರಿಂದಲೇ ಹತ್ಯೆ ಮಾಡಿದ್ರಾ ಎಂಬುದು ತನಿಖೆ ಬಳಿಕ ತಿಳಿಯಬೇಕಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on