ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಚಾಲಕ ರವಿ ಮನೆಯಲ್ಲಿ ತೀವ್ರ ವಿಚಾರಣೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ 8ನೇ ಆರೋಪಿ ಆಗಿರುವ ರವಿಶಂಕರ್ ಮನೆಯಲ್ಲಿ ವಿಚಾರಣೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಿಪಿಐ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ವಿಚಾರಣೆ ನಡೆದಿದೆ. ರವಿ ಕುಟುಂಬದವರಿಗೆ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಸಂಗ್ರಹಿಸಲಾಗಿದೆ. ಜೂನ್ 8ರಂದು ರೇಣುಕಾ ಸ್ವಾಮಿ ಅಪಹರಣಕ್ಕೆ ರವಿಶಂಕರ್ ಕಾರು ಬಳಕೆಯಾಗಿತ್ತು. ಆರೋಪಿಗಳು ಜೂನ್ 9ರಂದು ಅದೇ ಕಾರಿನಲ್ಲಿ ವಾಪಸ್ ಚಿತ್ರದುರ್ಗಕ್ಕೆ ಬಂದಿದ್ದರು.
ನಟ ದರ್ಶನ್ ಮತ್ತು ಗ್ಯಾಂಗ್ ಸೇರಿ ನಡೆಸಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿ (Renuka Swamy) ಹತ್ಯೆಯ ಬಗ್ಗೆ ಅನೇಕ ವಿಚಾರಗಳು ಹೊರಬರುತ್ತಿವೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿತ್ತು. ಅದಕ್ಕೆ ಬಳಕೆ ಆಗಿದ್ದು ರವಿಶಂಕರ್ ಎಂಬಾತನ ಕಾರು. ಆತ 8ನೇ ಆರೋಪಿ ಆಗಿದ್ದಾನೆ. ಚಿತ್ರದುರ್ಗದಲ್ಲಿ ಇರುವ ರವಿಶಂಕರ್ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಆತನ ಕಾರನ್ನು ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನ ಐನಳ್ಳಿ ಕುರುಬರಹಟ್ಟಿಯಲ್ಲಿ ರವಿಶಂಕರ್ ಮನೆ ಇದೆ. ಕೊಲೆ ನಡೆದ ಬಳಿಕ ದರ್ಶನ್ (Darshan) ಹಾಗೂ ಗ್ಯಾಂಗ್ನಿಂದ 5 ಲಕ್ಷ ರೂಪಾಯಿ ಪಡೆದಿದ್ದಾನೆ ಎಂಬ ಮಾಹಿತಿ ಇದೆ. ರವಿಶಂಕರ್ ಮನೆಯಲ್ಲಿ ಪೊಲೀಸರು ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ವಿಚಾರಣೆ ತೀವ್ರಗೊಂಡಿದೆ. ಕಾಮಾಕ್ಷಿಪಾಳ್ಯ ಸಿಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ವಿಚಾರಣೆ ನಡೆದಿದ್ದು, ಇದರಲ್ಲಿ ರವಿಶಂಕರ್ ಕುಟುಂಬಸ್ಥರಿಗೆ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಲಾಗಿದೆ. ಜೂ.8ರಂದು ರೇಣುಕಾಸ್ವಾಮಿ ಕಿಡ್ನ್ಯಾಪ್ಗೆ ರವಿಶಂಕರ್ ಕಾರು ಬಳಕೆ ಆಗಿತ್ತು. ಜೂ.9ರಂದು ಆರೋಪಿಗಳು ಅದೇ ಕಾರಿನಲ್ಲಿ ಚಿತ್ರದುರ್ಗಕ್ಕೆ (Chitradurga) ವಾಪಸ್ ಬಂದಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!
