ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಚಾಲಕ ರವಿ ಮನೆಯಲ್ಲಿ ತೀವ್ರ ವಿಚಾರಣೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ 8ನೇ ಆರೋಪಿ ಆಗಿರುವ ರವಿಶಂಕರ್​ ಮನೆಯಲ್ಲಿ ವಿಚಾರಣೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಿಪಿಐ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ವಿಚಾರಣೆ ನಡೆದಿದೆ. ರವಿ ಕುಟುಂಬದವರಿಗೆ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಸಂಗ್ರಹಿಸಲಾಗಿದೆ. ಜೂನ್​ 8ರಂದು ರೇಣುಕಾ ಸ್ವಾಮಿ ಅಪಹರಣಕ್ಕೆ ರವಿಶಂಕರ್​ ಕಾರು ಬಳಕೆಯಾಗಿತ್ತು. ಆರೋಪಿಗಳು ಜೂನ್​ 9ರಂದು ಅದೇ ಕಾರಿನಲ್ಲಿ ವಾಪಸ್​ ಚಿತ್ರದುರ್ಗಕ್ಕೆ ಬಂದಿದ್ದರು.

ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಚಾಲಕ ರವಿ ಮನೆಯಲ್ಲಿ ತೀವ್ರ ವಿಚಾರಣೆ
| Updated By: ಮದನ್​ ಕುಮಾರ್​

Updated on: Jun 16, 2024 | 4:03 PM

ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿ ನಡೆಸಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿ (Renuka Swamy) ಹತ್ಯೆಯ ಬಗ್ಗೆ ಅನೇಕ ವಿಚಾರಗಳು ಹೊರಬರುತ್ತಿವೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿತ್ತು. ಅದಕ್ಕೆ ಬಳಕೆ ಆಗಿದ್ದು ರವಿಶಂಕರ್​ ಎಂಬಾತನ ಕಾರು. ಆತ 8ನೇ ಆರೋಪಿ ಆಗಿದ್ದಾನೆ. ಚಿತ್ರದುರ್ಗದಲ್ಲಿ ಇರುವ ರವಿಶಂಕರ್ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಆತನ ಕಾರನ್ನು ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನ ಐನಳ್ಳಿ ಕುರುಬರಹಟ್ಟಿಯಲ್ಲಿ ರವಿಶಂಕರ್​​ ಮನೆ ಇದೆ. ಕೊಲೆ ನಡೆದ ಬಳಿಕ ದರ್ಶನ್​ (Darshan) ಹಾಗೂ ಗ್ಯಾಂಗ್​ನಿಂದ 5 ಲಕ್ಷ ರೂಪಾಯಿ ಪಡೆದಿದ್ದಾನೆ ಎಂಬ ಮಾಹಿತಿ ಇದೆ. ರವಿಶಂಕರ್​ ಮನೆಯಲ್ಲಿ ಪೊಲೀಸರು ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ವಿಚಾರಣೆ ತೀವ್ರಗೊಂಡಿದೆ. ಕಾಮಾಕ್ಷಿಪಾಳ್ಯ ಸಿಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ವಿಚಾರಣೆ ನಡೆದಿದ್ದು, ಇದರಲ್ಲಿ ರವಿಶಂಕರ್ ಕುಟುಂಬಸ್ಥರಿಗೆ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಲಾಗಿದೆ. ಜೂ.8ರಂದು ರೇಣುಕಾಸ್ವಾಮಿ ಕಿಡ್ನ್ಯಾಪ್​​ಗೆ ರವಿಶಂಕರ್​ ಕಾರು ಬಳಕೆ ಆಗಿತ್ತು. ಜೂ.9ರಂದು ಆರೋಪಿಗಳು ಅದೇ ಕಾರಿನಲ್ಲಿ ಚಿತ್ರದುರ್ಗಕ್ಕೆ (Chitradurga) ವಾಪಸ್​ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ
ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ
ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ
ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ