ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಚಾಲಕ ರವಿ ಮನೆಯಲ್ಲಿ ತೀವ್ರ ವಿಚಾರಣೆ

Edited By:

Updated on: Jun 16, 2024 | 4:03 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ 8ನೇ ಆರೋಪಿ ಆಗಿರುವ ರವಿಶಂಕರ್​ ಮನೆಯಲ್ಲಿ ವಿಚಾರಣೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಿಪಿಐ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ವಿಚಾರಣೆ ನಡೆದಿದೆ. ರವಿ ಕುಟುಂಬದವರಿಗೆ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಸಂಗ್ರಹಿಸಲಾಗಿದೆ. ಜೂನ್​ 8ರಂದು ರೇಣುಕಾ ಸ್ವಾಮಿ ಅಪಹರಣಕ್ಕೆ ರವಿಶಂಕರ್​ ಕಾರು ಬಳಕೆಯಾಗಿತ್ತು. ಆರೋಪಿಗಳು ಜೂನ್​ 9ರಂದು ಅದೇ ಕಾರಿನಲ್ಲಿ ವಾಪಸ್​ ಚಿತ್ರದುರ್ಗಕ್ಕೆ ಬಂದಿದ್ದರು.

ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿ ನಡೆಸಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿ (Renuka Swamy) ಹತ್ಯೆಯ ಬಗ್ಗೆ ಅನೇಕ ವಿಚಾರಗಳು ಹೊರಬರುತ್ತಿವೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿತ್ತು. ಅದಕ್ಕೆ ಬಳಕೆ ಆಗಿದ್ದು ರವಿಶಂಕರ್​ ಎಂಬಾತನ ಕಾರು. ಆತ 8ನೇ ಆರೋಪಿ ಆಗಿದ್ದಾನೆ. ಚಿತ್ರದುರ್ಗದಲ್ಲಿ ಇರುವ ರವಿಶಂಕರ್ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಆತನ ಕಾರನ್ನು ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನ ಐನಳ್ಳಿ ಕುರುಬರಹಟ್ಟಿಯಲ್ಲಿ ರವಿಶಂಕರ್​​ ಮನೆ ಇದೆ. ಕೊಲೆ ನಡೆದ ಬಳಿಕ ದರ್ಶನ್​ (Darshan) ಹಾಗೂ ಗ್ಯಾಂಗ್​ನಿಂದ 5 ಲಕ್ಷ ರೂಪಾಯಿ ಪಡೆದಿದ್ದಾನೆ ಎಂಬ ಮಾಹಿತಿ ಇದೆ. ರವಿಶಂಕರ್​ ಮನೆಯಲ್ಲಿ ಪೊಲೀಸರು ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ವಿಚಾರಣೆ ತೀವ್ರಗೊಂಡಿದೆ. ಕಾಮಾಕ್ಷಿಪಾಳ್ಯ ಸಿಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ವಿಚಾರಣೆ ನಡೆದಿದ್ದು, ಇದರಲ್ಲಿ ರವಿಶಂಕರ್ ಕುಟುಂಬಸ್ಥರಿಗೆ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಲಾಗಿದೆ. ಜೂ.8ರಂದು ರೇಣುಕಾಸ್ವಾಮಿ ಕಿಡ್ನ್ಯಾಪ್​​ಗೆ ರವಿಶಂಕರ್​ ಕಾರು ಬಳಕೆ ಆಗಿತ್ತು. ಜೂ.9ರಂದು ಆರೋಪಿಗಳು ಅದೇ ಕಾರಿನಲ್ಲಿ ಚಿತ್ರದುರ್ಗಕ್ಕೆ (Chitradurga) ವಾಪಸ್​ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More