ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದವರ ಮೇಲೂ ಕ್ರಮ? ತನಿಖೆ ಬಗ್ಗೆ ಮಾಹಿತಿ ನೀಡಿದ ಕಮಿಷನರ್

|

Updated on: Aug 23, 2024 | 3:04 PM

ನಟ ದರ್ಶನ್​ ಅವರ ಜೈಲು ವಾಸ ಮುಂದುವರಿದಿದೆ. ಕೊಲೆ ಆರೋಪದಲ್ಲಿ ಜೈಲು ಸೇರಿರುವ ಅವರನ್ನು ಭೇಟಿ ಮಾಡಲು ಈಗಾಗಲೇ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಆ ಪೈಕಿ ಕೆಲವರಿಗೆ ಸಂಕಷ್ಟ ಕಾದಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್​ ಬಿ. ದಯಾನಂದ ಮಾಹಿತಿ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ..

ಚಿತ್ರರಂಗದಲ್ಲಿ ದರ್ಶನ್ ಅವರಿಗೆ ಅನೇಕ ಆಪ್ತರು ಇದ್ದಾರೆ. ಆ ಪೈಕಿ ಕೆಲವರು ಈಗಾಗಲೇ ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್​ ಅವರನ್ನು ಭೇಟಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಆರೋಪ ದರ್ಶನ್​ ಮೇಲಿದೆ. ಇದೇ ಪ್ರಕರಣದಲ್ಲಿ ಚಿಕ್ಕಣ್ಣ ಮುಂತಾದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಕೇಸ್​ನಲ್ಲಿ ಸಾಕ್ಷಿಯಾಗಿ ಹೇಳಿಕೆ ನೀಡಿರುವವರು ಕೂಡ ದರ್ಶನ್​ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಆ ವಿಷಯ ನಮ್ಮ ಪರಿಶೀಲನೆಯಲ್ಲಿದೆ. ಕಾನೂನಾತ್ಮಕವಾಗಿ ಪರಿಶೀಲಿಸಿ ಆ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಯಾವ ರೀತಿ ಮಾಡುತ್ತೇವೆ ಎಂಬುದನ್ನು ಇಲ್ಲಿ ಹೇಳುವುದು ಕಷ್ಟ’ ಎಂದಿದ್ದಾರೆ ದಯಾನಂದ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on