ಕೊಲೆ ಕೇಸ್ ವಿಚಾರಣೆ: ಪವಿತ್ರಾ ಗೌಡ ಮುಖದಲ್ಲಿ ಕಾಣಿಸಿತು ಸಿಕ್ಕಾಪಟ್ಟೆ ಟೆನ್ಷನ್

Updated on: Nov 03, 2025 | 4:37 PM

ನ್ಯಾಯಾಲಯಕ್ಕೆ ಬಂದ ದರ್ಶನ್ ನೋಡಲು ಅನೇಕರು ಮುಗಿಬಿದ್ದರು. ಹೈಪ್ರೊಫೈಲ್ ಕೇಸ್ ಆದ ಕಾರಣ ಹಲವು ವಕೀಲರು ಕೋರ್ಟ್ ಹಾಲ್​​ನಲ್ಲಿ ಕಿಕ್ಕಿರಿದು ಸೇರಿದ್ದರು. ಹಲಸೂರು ಗೇಟ್ ಠಾಣೆಯ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ವಹಿಸಿದ್ದರು. ಪವಿತ್ರಾ ಗೌಡ ಅವರು ಆತಂಕದಲ್ಲೇ ಕೋರ್ಟ್​​ಗೆ ಬಂದರು.

ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಎ1 ಆಗಿದ್ದಾರೆ. ಇಂದು (ನ.3) ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಈ ವೇಳೆ ಎಲ್ಲ 17 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದರು. ನ್ಯಾಯಾಲಯಕ್ಕೆ ಬರುವಾಗ ಪವಿತ್ರಾ ಗೌಡ (Pavithra Gowda) ಅವರು ತುಂಬ ಆತಂಕದಲ್ಲಿ ಇದ್ದರು. ಅವರ ಮುಖದಲ್ಲಿ ಟೆನ್ಷನ್ ಕಾಣಿಸಿತು. ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳು ತಮ್ಮ ಮೇಲಿನ ದೋಷಾರೋಪಗಳನ್ನು ನಿರಾಕರಿಸಿದ್ದಾರೆ. ನವೆಂಬರ್ 10ರಂದು ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಲಿದೆ. ನ್ಯಾಯಾಲಯಕ್ಕೆ ಬಂದ ದರ್ಶನ್ (Darshan) ಅವರನ್ನು ನೋಡಲು ಸಾಕಷ್ಟು ಜನರು ಮುಗಿಬಿದ್ದರು. ಇದು ಹೈಪ್ರೊಫೈಲ್ ಕೇಸ್ ಆದ್ದರಿಂದ ಅನೇಕ ವಕೀಲರು ಕೂಡ ಕೋರ್ಟ್ ಹಾಲ್​​ನಲ್ಲಿ ಕಿಕ್ಕಿರಿದಿದ್ದರು. ಮುಂಜಾಗ್ರತಾ ಕ್ರಮವಾಗಿ ಹಲಸೂರು ಗೇಟ್ ಠಾಣೆಯ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More