ನಟ ದರ್ಶನ್ ವಿರುದ್ಧ ಸಾವಿರಾರು ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆಗಿ ಮುಂದುವರಿದಿದ್ದಾರೆ. ಚಾರ್ಜ್ಶೀಟ್ ಸಲ್ಲಿಕೆ ಆಗುತ್ತಿದ್ದಂತೆಯೇ ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ಜಾರ್ಜ್ಶೀಟ್ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಸಿಕ್ಕಿದೆ. ಇನ್ನೂ ಅದರ ಪ್ರತಿ ಸಿಗುವುದು ತಡವಾಗುತ್ತದೆ ಅಂತ ಅಧಿಕಾರಿಗಳು ನಮಗೆ ಹೇಳಿದ್ದಾರೆ. ಸಿಕ್ಕ ಬಳಿಕ ಅದರಲ್ಲಿ ಏನಿದೆ ಅಂತ ತಿಳಿದುಕೊಂಡು ಮಾತನಾಡುತ್ತೇನೆ’ ಎಂದು ರೇಣುಕಾಸ್ವಾಮಿ ತಂದೆ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.