ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ಮೊದಲ ರಿಯಾಕ್ಷನ್

Updated on: Sep 04, 2024 | 5:25 PM

ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಬೆಂಗಳೂರು ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಇಂದು (ಸೆಪ್ಟೆಂಬರ್ 4) ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಅವರ ತಂದೆ ಪ್ರತಿಕ್ರಿಯಿಸಿದ್ದಾರೆ. ಸದ್ಯಕ್ಕೆ ದರ್ಶನ್​ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಜಾಮೀನು ಸಿಗುತ್ತೋ ಇಲ್ಲವೋ ಎಂಬ ಟೆನ್ಷನ್​ ಅವರಿಗೆ ಹೆಚ್ಚಾಗಿದೆ.

ನಟ ದರ್ಶನ್​ ವಿರುದ್ಧ ಸಾವಿರಾರು ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಎ2 ಆಗಿ ಮುಂದುವರಿದಿದ್ದಾರೆ. ಚಾರ್ಜ್​ಶೀಟ್​ ಸಲ್ಲಿಕೆ ಆಗುತ್ತಿದ್ದಂತೆಯೇ ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ಜಾರ್ಜ್​ಶೀಟ್​ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಸಿಕ್ಕಿದೆ. ಇನ್ನೂ ಅದರ ಪ್ರತಿ ಸಿಗುವುದು ತಡವಾಗುತ್ತದೆ ಅಂತ ಅಧಿಕಾರಿಗಳು ನಮಗೆ ಹೇಳಿದ್ದಾರೆ. ಸಿಕ್ಕ ಬಳಿಕ ಅದರಲ್ಲಿ ಏನಿದೆ ಅಂತ ತಿಳಿದುಕೊಂಡು ಮಾತನಾಡುತ್ತೇನೆ’ ಎಂದು ರೇಣುಕಾಸ್ವಾಮಿ ತಂದೆ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More