AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ನಮ್ಮನ್ನು ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ

ದರ್ಶನ್ ನಮ್ಮನ್ನು ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ

ಮದನ್​ ಕುಮಾರ್​
|

Updated on: Jun 08, 2025 | 1:38 PM

Share

ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಜಾಮೀನು ಪಡೆದು ಹೊರಗೆ ಬಂದ ನಂತರ ರೇಣುಕಾಸ್ವಾಮಿ ಕುಟುಂಬ ಮೌನವಾಗಿದೆಯಾ ಎಂಬ ಪ್ರಶ್ನೆ ಎದುರಾಗಿದೆ. ಈ ಕುರಿತು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ಮಾತನಾಡಿದ್ದಾರೆ. ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಜಾಮೀನು ಪಡೆದು ದರ್ಶನ್ (Darshan) ಹೊರಬಂದ ಬಳಿಕ ರೇಣುಕಾಸ್ವಾಮಿ (Renukaswamy) ಕುಟುಂಬ ಮೌನವಾಗಿದೆಯಾ ಎಂಬ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ರೇಣುಕಾಸ್ವಾಮಿ ತಂದೆ (Renukaswamy Father) ಕಾಶಿನಾಥಯ್ಯ ಅವರು ಮಾತನಾಡಿದ್ದಾರೆ. ‘ನಾವು ಮೌನ ವಹಿಸಿಲ್ಲ. ಕಾನೂನಿಗೆ ಅದರದ್ದೇ ಆದ ಕ್ರಮ ಇರುತ್ತದೆ. ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗೆ ಇದೆ. ಜಾಮೀನು ವಿಷಯದಲ್ಲಿ ಈ ಪ್ರಕರಣ ಸುಪ್ರೀಂ ಕೋರ್ಟ್ ತನಕ ಹೋಗಿದೆ. ದರ್ಶನ್ ಹೊರಗಡೆ ಬಂದ ಬಳಿಕ ನಮ್ಮನ್ನು ಸಂಪರ್ಕ ಮಾಡಿಲ್ಲ. ಅವರು ನಮ್ಮನ್ನು ಸಂಪರ್ಕ ಮಾಡುತ್ತಾರೆ ಎಂಬ ನಂಬಿಕೆ ಇಲ್ಲ. ಕಾನೂನಿನ ದೃಷ್ಟಿಯಿಂದ ಅವರು ಈ ರೀತಿ ವಿಚಾರ ಮಾಡಿರಬಹುದು. ಒಂದು ವೇಳೆ ಸಂಪರ್ಕಿಸಲು ಬಂದರೆ ಆ ಬಗ್ಗೆ ನಮ್ಮ ಹಿರಿಯರು ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಕಾಶಿನಾಥಯ್ಯ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.