ದೇಶದ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ದರ್ಶನ್ ಕೇಸ್​ಗೆ ಎರಡನೇ ಸ್ಥಾನ

Updated on: Oct 06, 2025 | 1:01 PM

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಈ ಪ್ರಕಣ ಸಾಕಷ್ಟು ಸೆನ್ಸೇಷನ್ ಕೂಡ ಸೃಷ್ಟಿ ಮಾಡಿತ್ತು. ಈಗ ಈ ಪ್ರಕರಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಾ ಇವೆ. ಹೀಗಿರುವಾಗಲೇ ಈ ಪ್ರಕರಣ ದೇಶದಲ್ಲಿ ಸೆನ್ಸೇಷನ್ ಸೃಷ್ಟಿಸಿದ ಎರಡನೇ ಪ್ರಕರಣವಾಗಿ ಹೊರ ಹೊಮ್ಮಿದೆ.

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಘಟನೆ ನಡೆದು ವರ್ಷಗಳೇ ಕಳೆದರೂ ಇದರ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ. ಈಗ ಈ ಪ್ರಕರಣವು ದೇಶದ ಎರಡನೇ ಪ್ರಮುಖ ಕೇಸ್ ಎಂದು ಅನಿಸಿಕೊಂಡಿದೆ. ಒಂದು ವರ್ಷದಲ್ಲಿ ಮೇಜರ್ ಕೇಸ್ ಅನಿಸಿಕೊಂಡ ಪ್ರಕರಣಗಳ ಪಟ್ಟಿ ರಿವೀಲ್ ಆಗಿದೆ. ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಕೇಸ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ.  ದೇಶದ ಪ್ರಮುಖ ಕೇಸ್​ಗಳಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ 2ನೇ ಸ್ಥಾನ ಸಿಕ್ಕಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರ ಸೆಷನ್ ಕೋರ್ಟ್, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​ನಲ್ಲಿ ಸುದ್ದಿ ಆಗಿತ್ತು. ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಕಾರಣದಿಂದಲೇ ದರ್ಶನ್ ಪ್ರಕರಣಕ್ಕೆ ತೂಕ ಬಂದಿದೆ. ಉಳಿದಂತೆ ಪುಣೆ ಪೋರ್ಷೆ ಕೇಸ್, ಹೈದರಾಬಾದ್ ಟೆಕ್ ಸ್ಕ್ಯಾಮ್, ಗಾಯಕ ಝುಬೇನ್ ಗರ್ಗ್ ಸಾವು ಪ್ರಮುಖ ಪ್ರಕರಣಗಳಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.