ತಂದೆಯ ಅಂತ್ಯಕ್ರಿಯೆ ನೆರವೇರಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಅನುಕುಮಾರ್​

ನಟ ದರ್ಶನ ಮತ್ತು ಗ್ಯಾಂಗ್​ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಅನುಕುಮಾರ್​ ತಂದೆ ಚಂದ್ರಣ್ಣ (60) ಅವರ ಅಂತ್ಯಕ್ರಿಯೆ ಶನಿವಾರ ಮಧ್ಯರಾತ್ರಿ ಹೊಳಲ್ಕೆರೆ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿತು.

ತಂದೆಯ ಅಂತ್ಯಕ್ರಿಯೆ ನೆರವೇರಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಅನುಕುಮಾರ್​
|

Updated on: Jun 16, 2024 | 8:06 AM

ಚಿತ್ರದುರ್ಗ, ಜೂನ್​ 16: ನಟ ದರ್ಶನ (Darshan) ಮತ್ತು ಗ್ಯಾಂಗ್​ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿ ಅನುಕುಮಾರ್​ ತಂದೆ ಚಂದ್ರಣ್ಣ (60) ಅವರ ಅಂತ್ಯಕ್ರಿಯೆ ಶನಿವಾರ ಮಧ್ಯರಾತ್ರಿ ಹೊಳಲ್ಕೆರೆ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿತು. ತಂದೆಯ ಅಂತ್ಯಕ್ತಿಯೆಯಲ್ಲಿ ಆರೋಪಿ ಅನುಕುಮಾರ್​ ಭಾಗವಹಿಸಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗನನ್ನು ಕಂಡು ತಾಯಿ ಕಣ್ಣೀರಿಟ್ಟರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ7 ಅನುಕುಮಾರ್​ ಬಂಧಿತರಾಗಿದ್ದನ್ನು ತಿಳಿದು ಅವರ ತಂದೆ ಚಂದ್ರಣ್ಣ ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರೇಣುಕಾಸ್ವಾಮಿಯನ್ನು ಅಪಹರಿಸಿದ್ದ ನಾಲ್ವರು ಆರೋಪಿಗಳು ಎ4 ರಘು, ಎ6 ಜಗದೀಶ್, ಎ7 ಅನು, ಎ8 ರವಿಯನ್ನು ಪೊಲೀಸರು ಚಿತ್ರದುರ್ಗಕ್ಕೆ ಕರೆತಂದಿದ್ದಾರೆ. ಅನುಕುಮಾರ್​ ಹೊರತುಪಡಿಸಿ ಉಳಿದ ಆರೋಪಿಗಳನ್ನು ಖಾಸಗಿ ಹೋಟೆಲ್​​ನಲ್ಲಿ ಇರಿಸಲಾಗಿದೆ. ಅಂತ್ಯಕ್ರಿಯೆ ನೆರವೇರಿದ ಬಳಿಕ ಪೊಲೀಸರು ಸ್ಥಳ ಮಹಜರು ನಡೆಸಿದರು.

ಇದನ್ನೂ ಓದಿ: ಜೂನ್ 20ರವರೆಗೆ ದರ್ಶನ್ ಹಾಗೂ ಗ್ಯಾಂಗ್​ ಪೊಲೀಸ್ ಕಸ್ಟಡಿ ಮುಂದುವರಿಕೆ

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!