ರೇಣುಕಾಸ್ವಾಮಿ ಮಗನಿಗೆ ನಾಮಕರಣ; ಇಟ್ಟ ಹೆಸರೇನು?

Updated on: Feb 23, 2025 | 2:46 PM

ರೇಣುಕಾಸ್ವಾಮಿ ಅವರು ಇತ್ತೀಚೆಗೆ ಕೊಲೆ ಆಗಿದ್ದಾರೆ. ಅವರ ಸಾವಿನ ಹಿಂದಿನ ರಹಸ್ಯ ಇನ್ನೂ ಸ್ಪಷ್ಟವಾಗಿ ಹೊರ ಬಿದ್ದಿಲ್ಲ. ಪ್ರಕರಣದಲ್ಲಿ ಕೊಲೆ ಆದ ರೇಣುಕಾ ಸ್ವಾಮಿಗೆ ಇತ್ತೀಚೆಗೆ ಮಗು ಜನಿಸಿತ್ತು. ಈ ಮಗುವಿಗೆ ಇಟ್ಟ ಹೆಸರು ಏನು ಎಂಬುದನ್ನು ಕುಟುಂಬದವರು ರಿವೀಲ್ ಮಾಡಿದ್ದಾರೆ.

ರೇಣುಕಾಸ್ವಾಮಿ ಅವರು ಕೊಲೆ ಆಗಿ ಹಲವು ತಿಂಗಳು ಕಳೆದಿದೆ. ಇವರು ಸಾಯುವಾಗ ಅವರ ಪತ್ನಿ ಗರ್ಭಿಣಿ ಆಗಿದ್ದರು. ಇತ್ತೀಚೆಗೆ ಅವರಿಗೆ ಮಗು ಜನಿಸಿತ್ತು. ಇಂದು (ಫೆಬ್ರವರಿ 23) ಮಗುವಿಗೆ ನಾಮಕರಣ ಮಾಡಲಾಗಿದೆ. ನಾಮಕರಣದ ಬಳಿಕ ರೇಣುಕಾಸ್ವಾಮಿ ತಂದೆ ಹೇಳಿಕೆ ನೀಡಿದ್ದಾರೆ. ‘ಮೊಮ್ಮೊಗ ಬಂದಿರೋದು ಖುಷಿ ಇದೆ. ನಮ್ಮ ಸಂಪ್ರದಾಯದ ಪ್ರಕಾರ ನಾಮಕರಣ ಮಾಡಲಾಗಿದೆ. ಗುರುಗಳ ಆಶೀರ್ವಾದಂತೆ ಶಶಿಧರ ಎಂದು ಹೆಸರು ಇಡುತ್ತಿದ್ದೇವೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More