ಚಿತ್ರದುರ್ಗ: ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ; ಕೃತ್ಯ ಎಸಗಿದ್ದು ಯಾರು?

Updated By: ಪ್ರಸನ್ನ ಹೆಗಡೆ

Updated on: Dec 10, 2025 | 1:00 PM

ನಟ ದರ್ಶನ್​​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣ 2024ರ ಜೂನ್​​ ತಿಂಗಳಿನಲ್ಲಿ ಬೆಂಗಳೂರಲ್ಲಿ ಭೀಕರವಾಗಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಸಮಾಧಿಯ ನಾಮಫಲಕವನ್ನು ಧ್ವಂಸ ಮಾಡಲಾಗಿದೆ. ಚಿತ್ರದುರ್ಗದಲ್ಲಿರುವ ಸಮಾಧಿ ಬಳಿ ಲೇಔಟ್​​ ನಿರ್ಮಾಣ ಮಾಡುವ ವೇಳೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ರೇಣುಕಾಸ್ವಾಮಿ ಕುಟುಂಬಸ್ಥರು ತಿಳಿಸಿದ್ದಾರೆ.

ಚಿತ್ರದುರ್ಗ, ಡಿಸೆಂಬರ್​​ 10: ರೇಣುಕಾಸ್ವಾಮಿ ಹತ್ಯೆ ಕೇಸ್​​ ವಿಚಾರವಾಗಿ ಪ್ರಮುಖ ಆರೋಪಿಗಳಾದ ನಟ ದರ್ಶನ್​​, ಪವಿತ್ರಾ ಸೇರಿ ಗ್ಯಾಂಗ್​​ ಜೈಲು ಸೇರಿರುವ ನಡುವೆ ಇತ್ತ ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಸಮಾಧಿಯ ನಾಮಫಲಕ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ರುದ್ರಭೂಮಿ ಬಳಿ ಲೇಔಟ್ ನಿರ್ಮಾಣ ಮಾಡುವ ವೇಳೆ ಸಮಾಧಿಗೆ ಧಕ್ಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ರೇಣುಕಾಸ್ವಾಮಿ ಕುಟುಂಬಸ್ಥರು ತಿಳಿಸಿದ್ದಾರೆ. ನಟ ದರ್ಶನ್​​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣ 2024ರ ಜೂನ್​​ ತಿಂಗಳಿನಲ್ಲಿ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.