ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟ ರೇಣುಕಾಸ್ವಾಮಿ ಅಪ್ಪ

ನಟ ದರ್ಶನ್​ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟಿದ್ದಾರೆ.

ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟ ರೇಣುಕಾಸ್ವಾಮಿ ಅಪ್ಪ
|

Updated on:Aug 25, 2024 | 9:24 PM

ಚಿತ್ರದುರ್ಗ, ಆ.25: ನಟ ದರ್ಶನ್​ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟಿದ್ದಾರೆ. ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ. ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ. ನಟ ದರ್ಶನ್​ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ, ರೆಸಾರ್ಟ್​ನಲ್ಲಿರುವಂತೆ ಕಂಡು ಶಾಕ್​ ಆಯ್ತು.  ನಮಗೆ ನೋವು, ಸಂಕಟ ಆಗುತ್ತಿದೆ ಎಂದು ಕಣ್ಣೀರು  ಹಾಕಿದ ಅವರು, ಈ ಕುರಿತು ಮುಖ್ಯಮಂತ್ರಿ, ಗೃಹಸಚಿವರು ಗಮನಹರಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Sun, 25 August 24

Follow us