ಬೆಂಗಳೂರು ಉತ್ತರ ತಾಲ್ಲೂಕಿನ ನೆಲಗೆದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಅದ್ದೂರಿ ಪ್ರಾರಂಭೋತ್ಸವ, ಮನಸೆಳೆದ ಜಾಥಾ!

ಶಾಲೆ ಬಿಟ್ಟು ಹೊಗಿರುವ ಮಕ್ಕಳಲ್ಲಿ ವಾಪಸ್ಸು ಬರುವ ಪ್ರೇರಣೆ ಹುಟ್ಟಸಲು ಶಾಲೆಯ, ಶಿಕ್ಷಕರು, ಮತ್ತು ಶಿಕ್ಷಣಾಧಿಕಾರಿಗಳಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು. ವೃತ್ತಿಪರ ಡೊಳ್ಳುವಾದಕರು ಜಾಥಾಗೆ ವಿಶೇಷ ಮೆರಗು ನೀಡಿದರು. ತಾಲ್ಲೂಕಿನ ಶಿಕ್ಷಣಾಧಿಕಾರಿ ಆಂಜಿನಪ್ಪ ಕಾರ್ಯಕ್ರಮದ ಉಸ್ತುವಾರಿವಹಿಸಿಕೊಂಡು ಎಲ್ಲವನ್ನು ಸಾಂಗವಾಗಿ ನೆರವೇರಿಸಿದರು.

ಬೆಂಗಳೂರು ಉತ್ತರ ತಾಲ್ಲೂಕಿನ ನೆಲಗೆದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಅದ್ದೂರಿ ಪ್ರಾರಂಭೋತ್ಸವ, ಮನಸೆಳೆದ ಜಾಥಾ!
|

Updated on: May 31, 2024 | 5:03 PM

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರನ್ನು (Madhu Bangarappa) ವಿರೋಧ ಪಕ್ಷದ ನಾಯಕರು ಟೀಕಿಸುತ್ತಿರುತ್ತಾರೆ, ಅದರೆ ಅವರಿಂದ ಆಗುತ್ತಿರುವ ಉತ್ತಮ ಕೆಲಸಗಳನ್ನು ಅವರು ಗಮನಿಸಬೇಕು. ಇವತ್ತು ರಾಜ್ಯದಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನರಾರಂಭಗೊಂಡಿವೆ (reopened). ಎಲ್ಲ ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ವಿಜೃಂಭಣೆ ಮತ್ತು ಅರ್ಥಗರ್ಭಿತವಾಗಿ ಆಚರಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ (education department) ಸುತ್ತೋಲೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನ ನೆಲಗೆದರಹಳ್ಳಿಯ ಗೃಹಲಕ್ಷ್ಮಿ ಬಡಾವಣೆಲ್ಲಿರುವ ನಮ್ಮೂರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ರೀಓಪನಿಂಗ್ ಕಣ್ಮನ ಸೆಳೆಯಿತು. ಶಾಲೆ ಬಿಟ್ಟು ಹೊಗಿರುವ ಮಕ್ಕಳಲ್ಲಿ ವಾಪಸ್ಸು ಬರುವ ಪ್ರೇರಣೆ ಹುಟ್ಟಸಲು ಶಾಲೆಯ, ಶಿಕ್ಷಕರು, ಮತ್ತು ಶಿಕ್ಷಣಾಧಿಕಾರಿಗಳಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು. ವೃತ್ತಿಪರ ಡೊಳ್ಳುವಾದಕರು ಜಾಥಾಗೆ ವಿಶೇಷ ಮೆರಗು ನೀಡಿದರು. ತಾಲ್ಲೂಕಿನ ಶಿಕ್ಷಣಾಧಿಕಾರಿ ಆಂಜಿನಪ್ಪ ಕಾರ್ಯಕ್ರಮದ ಉಸ್ತುವಾರಿವಹಿಸಿಕೊಂಡು ಎಲ್ಲವನ್ನು ಸಾಂಗವಾಗಿ ನೆರವೇರಿಸಿದರು. ತಾಯಿ ಸರಸ್ವತಿಗೆ ಪೂಜೆ ಸಲ್ಲಿಸಿದ ಬಳಿಕ ಮಕ್ಕಳಿಗೆ ಸಮವಸ್ತ್ರ ಮತ್ತು ಸಿಹಿ ಹಂಚಲಾಯಿತು. ಇಂಥ ಕಾರ್ಯಕ್ರಮಗಳು ಕೇವಲ ಖಾಸಗಿ ಶಾಲೆಗಳಲ್ಲಿ ಮಾತ್ರ ನಡೆಯುತ್ತಿದ್ದವು. ಅದರೆ, ಆ ಶಾಲೆಗಳನ್ನು ಮೀರಿಸುವ ಹಾಗೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಏರ್ಪರ್ಟ್ಟಿರುವುದು ಶ್ಲಾಘನೀಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪರಿಷ್ಕರಣೆಯಾಗುತ್ತಾ ಶಾಲಾ ಪಠ್ಯ ಪುಸ್ತಕ? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್