AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಉತ್ತರ ತಾಲ್ಲೂಕಿನ ನೆಲಗೆದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಅದ್ದೂರಿ ಪ್ರಾರಂಭೋತ್ಸವ, ಮನಸೆಳೆದ ಜಾಥಾ!

ಬೆಂಗಳೂರು ಉತ್ತರ ತಾಲ್ಲೂಕಿನ ನೆಲಗೆದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಅದ್ದೂರಿ ಪ್ರಾರಂಭೋತ್ಸವ, ಮನಸೆಳೆದ ಜಾಥಾ!

ಅರುಣ್​ ಕುಮಾರ್​ ಬೆಳ್ಳಿ
|

Updated on: May 31, 2024 | 5:03 PM

Share

ಶಾಲೆ ಬಿಟ್ಟು ಹೊಗಿರುವ ಮಕ್ಕಳಲ್ಲಿ ವಾಪಸ್ಸು ಬರುವ ಪ್ರೇರಣೆ ಹುಟ್ಟಸಲು ಶಾಲೆಯ, ಶಿಕ್ಷಕರು, ಮತ್ತು ಶಿಕ್ಷಣಾಧಿಕಾರಿಗಳಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು. ವೃತ್ತಿಪರ ಡೊಳ್ಳುವಾದಕರು ಜಾಥಾಗೆ ವಿಶೇಷ ಮೆರಗು ನೀಡಿದರು. ತಾಲ್ಲೂಕಿನ ಶಿಕ್ಷಣಾಧಿಕಾರಿ ಆಂಜಿನಪ್ಪ ಕಾರ್ಯಕ್ರಮದ ಉಸ್ತುವಾರಿವಹಿಸಿಕೊಂಡು ಎಲ್ಲವನ್ನು ಸಾಂಗವಾಗಿ ನೆರವೇರಿಸಿದರು.

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರನ್ನು (Madhu Bangarappa) ವಿರೋಧ ಪಕ್ಷದ ನಾಯಕರು ಟೀಕಿಸುತ್ತಿರುತ್ತಾರೆ, ಅದರೆ ಅವರಿಂದ ಆಗುತ್ತಿರುವ ಉತ್ತಮ ಕೆಲಸಗಳನ್ನು ಅವರು ಗಮನಿಸಬೇಕು. ಇವತ್ತು ರಾಜ್ಯದಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನರಾರಂಭಗೊಂಡಿವೆ (reopened). ಎಲ್ಲ ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ವಿಜೃಂಭಣೆ ಮತ್ತು ಅರ್ಥಗರ್ಭಿತವಾಗಿ ಆಚರಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ (education department) ಸುತ್ತೋಲೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನ ನೆಲಗೆದರಹಳ್ಳಿಯ ಗೃಹಲಕ್ಷ್ಮಿ ಬಡಾವಣೆಲ್ಲಿರುವ ನಮ್ಮೂರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ರೀಓಪನಿಂಗ್ ಕಣ್ಮನ ಸೆಳೆಯಿತು. ಶಾಲೆ ಬಿಟ್ಟು ಹೊಗಿರುವ ಮಕ್ಕಳಲ್ಲಿ ವಾಪಸ್ಸು ಬರುವ ಪ್ರೇರಣೆ ಹುಟ್ಟಸಲು ಶಾಲೆಯ, ಶಿಕ್ಷಕರು, ಮತ್ತು ಶಿಕ್ಷಣಾಧಿಕಾರಿಗಳಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು. ವೃತ್ತಿಪರ ಡೊಳ್ಳುವಾದಕರು ಜಾಥಾಗೆ ವಿಶೇಷ ಮೆರಗು ನೀಡಿದರು. ತಾಲ್ಲೂಕಿನ ಶಿಕ್ಷಣಾಧಿಕಾರಿ ಆಂಜಿನಪ್ಪ ಕಾರ್ಯಕ್ರಮದ ಉಸ್ತುವಾರಿವಹಿಸಿಕೊಂಡು ಎಲ್ಲವನ್ನು ಸಾಂಗವಾಗಿ ನೆರವೇರಿಸಿದರು. ತಾಯಿ ಸರಸ್ವತಿಗೆ ಪೂಜೆ ಸಲ್ಲಿಸಿದ ಬಳಿಕ ಮಕ್ಕಳಿಗೆ ಸಮವಸ್ತ್ರ ಮತ್ತು ಸಿಹಿ ಹಂಚಲಾಯಿತು. ಇಂಥ ಕಾರ್ಯಕ್ರಮಗಳು ಕೇವಲ ಖಾಸಗಿ ಶಾಲೆಗಳಲ್ಲಿ ಮಾತ್ರ ನಡೆಯುತ್ತಿದ್ದವು. ಅದರೆ, ಆ ಶಾಲೆಗಳನ್ನು ಮೀರಿಸುವ ಹಾಗೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಏರ್ಪರ್ಟ್ಟಿರುವುದು ಶ್ಲಾಘನೀಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪರಿಷ್ಕರಣೆಯಾಗುತ್ತಾ ಶಾಲಾ ಪಠ್ಯ ಪುಸ್ತಕ? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು