ಗಣರಾಜ್ಯೋತ್ಸವದಲ್ಲಿ ಅಪಶೃತಿ.. ಧ್ವಜ ಕಂಬಕ್ಕೆ ವಿದ್ಯುತ್ ತಂತಿ ತಗುಲಿ ಇಬ್ಬರು ಯುವಕರ ಸಾವು

ಸಾಧು ಶ್ರೀನಾಥ್​

Updated on: Jan 26, 2024 | 2:24 PM

Telangana: ಧ್ವಜ ಅನಾವರಣಕ್ಕಾಗಿ ಸ್ಥಳೀಯ ಯುವಕರು ಕಬ್ಬಿಣದ ಕಂಬದಿಂದ ಧ್ವಜವನ್ನು ಹಾರಿಸಲು ತಯಾರಿ ನಡೆಸುತ್ತಿದ್ದರು. ಆ ವೇಳೇ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಬ್ಬಿಣದ ಪೈಪ್‌ಗೆ ತಾಗಿದೆ. ವಿದ್ಯುತ್ ತಂತಿಗಳು ಧ್ವಜಕ್ಕೆ ತಗುಲಿದ ಪರಿಣಾಮ ವಿಜಯ್, ಚಕ್ರಿ ಮತ್ತು ಅಜಿತ್ ಸಾವನ್ನಪ್ಪಿದ್ದಾರೆ.

ಮುಲುಗು (ತೆಲಂಗಾಣ), ಜನವರಿ 26: ಗಣರಾಜ್ಯೋತ್ಸವದ ವೇಳೆ ಭಾರೀ ದುರಂತ ಸಂಭವಿಸಿದೆ. ಧ್ವಜಾರೋಹಣ ಮಾಡುವಾಗ ವಿದ್ಯುತ್ ತಂತಿಗಳು ಧ್ವಜದ ಪೈಪ್‌ಗೆ ತಗುಲಿ ಇಬ್ಬರು ಯುವಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಯುವಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಕೂಡಲೇ ಸಚಿವೆ ಸೀತಕ್ಕ ಪರಿಹಾರ ಕಾರ್ಯದಲ್ಲಿ ತೊಡಗಿದರು. ಮುಲುಗು ಜಿಲ್ಲಾ ಕೇಂದ್ರದ ದಲಿತವಾಡದಲ್ಲಿ ಈ ದಾರುಣ ಘಟನೆ ನಡೆದಿದೆ.

ಧ್ವಜ ಅನಾವರಣಕ್ಕಾಗಿ ಸ್ಥಳೀಯ ಯುವಕರು ಕಬ್ಬಿಣದ ಕಂಬದಿಂದ ಧ್ವಜವನ್ನು ಹಾರಿಸಲು ತಯಾರಿ ನಡೆಸುತ್ತಿದ್ದರು. ಆ ವೇಳೇ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಬ್ಬಿಣದ ಪೈಪ್‌ಗೆ ತಾಗಿದೆ. ವಿದ್ಯುತ್ ತಂತಿಗಳು ಧ್ವಜಕ್ಕೆ ತಗುಲಿದ ಪರಿಣಾಮ ವಿಜಯ್, ಚಕ್ರಿ ಮತ್ತು ಅಜಿತ್ ಸಾವನ್ನಪ್ಪಿದ್ದಾರೆ. ತಕ್ಷಣ ಅವರನ್ನು ಮುಲುಗು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಯಾವುದೇ ಫಲ ಸಿಗಲಿಲ್ಲ.

ಚಿಕಿತ್ಸೆ ಫಲಕಾರಿಯಾಗದೆ ಅಜಿತ್ ಮತ್ತು ವಿಜಯ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ವಿಷಯ ತಿಳಿದ ತಕ್ಷಣ ಸಚಿವೆ ಸೀತಕ್ಕ ಆತಂಕ ವ್ಯಕ್ತಪಡಿಸಿದ್ದಾರೆ. ಅಗತ್ಯವಿದ್ದರೆ, ಉತ್ತಮ ಚಿಕಿತ್ಸೆಗಾಗಿ ಗಾಯಳುವನ್ನು ಹೈದರಾಬಾದ್‌ಗೆ ಕರೆದೊಯ್ಯಲು ಸೂಚಿಸಲಾಗಿದೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು