ಮೇಕೆ ಮರಿ ತಿನ್ನಲು‌ ಬಂದಿದ್ದ 11 ಅಡಿ ಉದ್ದದ ಬೃಹತ್ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ಸ್ಥಳೀಯರು

ಮಹೇಶ್ ಇ, ಭೂಮನಹಳ್ಳಿ Edited By: ಆಯೇಷಾ ಬಾನು

Updated on: May 21, 2024 | 9:45 AM

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಣುವಿನಕುರಿಕೆ ಗ್ರಾಮದಲ್ಲಿ ಸುಮಾರು 11 ಅಡಿ ಉದ್ದ ಹಾಗೂ 16 ಕೆಜಿ ತೂಕದ ಬೃಹತ್ ಹೆಬ್ಬಾವನ್ನು ರಕ್ಷಿಸಲಾಗಿದೆ. ಉರಗ ಸಂರಕ್ಷಕ ದಿಲೀಪ್ ಕಾರ್ಯಾಚರಣೆ ನಡೆಸಿ ಹೆಬ್ಬಾವು ರಕ್ಷಿಸಿ ಅರಣ್ಯ ಪ್ರದೇಶಕ್ಕೆ‌ ಬಿಟ್ಟಿದ್ದಾರೆ.

ತುಮಕೂರು, ಮೇ.21: ಮೇಕೆ ಮರಿಯನ್ನ ತಿನ್ನಲು‌ ಬಂದ ಬೃಹತ್ ಹೆಬ್ಬಾವನ್ನು (Python)  ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟು ಬಂದಿರುವ ಘಟನೆ ನಡೆದಿದೆ. ತುಮಕೂರು (Tumkur) ಜಿಲ್ಲೆಯ ಕೊರಟಗೆರೆ ತಾಲೂಕಿನ ಮಣುವಿನಕುರಿಕೆ ಗ್ರಾಮದಲ್ಲಿ ಸುಮಾರು 11 ಅಡಿ ಉದ್ದ ಹಾಗೂ 16 ಕೆಜಿ ತೂಕದ ಬೃಹತ್ ಹೆಬ್ಬಾವನ್ನು ರಕ್ಷಿಸಲಾಗಿದೆ.

ರೈತನೋರ್ವ ತನ್ನ ಕುರಿಗಳನ್ನು ಮೇಯಿಸಲು ಹೋದಾಗ ಮೇಕೆ ಮರಿಯನ್ನ ಹಿಡಿದು ನುಂಗುತ್ತಿದ್ದ ಹೆಬ್ಬಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಭಯಕ್ಕೆ ಕೂಗಾಡಿ ಸ್ಥಳೀಯರನ್ನು ಸೇರಿಸಿದ್ದಾರೆ. ಸ್ಥಳೀಯರ ಅಬ್ಬರಕ್ಕೆ ಭಯಗೊಂಡ ಹೆಬ್ಬಾವು ಮೇಕೆ ಮರಿಯನ್ನು ಬಿಟ್ಟು ಕತ್ತಾಳೆ ಗಿಡದೊಳಕ್ಕೆ ಸೇರಿ ಕೊಂಡಿದೆ. ತಕ್ಷಣ ಉರಗ ಸಂರಕ್ಷಕರಿಗೆ ಮಾಹಿತಿ ನೀಡಲಾಗಿದ್ದು ಸ್ಥಳಕ್ಕೆ ಬಂದ ಉರಗ ಸಂರಕ್ಷಕ ದಿಲೀಪ್ ಕಾರ್ಯಾಚರಣೆ ನಡೆಸಿ ಹೆಬ್ಬಾವು ರಕ್ಷಿಸಿ ಅರಣ್ಯ ಪ್ರದೇಶಕ್ಕೆ‌ ಬಿಟ್ಟಿದ್ದಾರೆ. ಅರಣ್ಯ ಅಧಿಕಾರಿಗಳ‌ ಜೊತೆಗೆ ಕಾರ್ಯಾಚರಣೆ ನಡೆಸಿ ಹೆಬ್ಬಾವು ರಕ್ಷಣೆ ಮಾಡಲಾಗಿದೆ. ಹೆಬ್ಬಾವು ಕಂಡು ಜನರು ಪುಲ್ ಶಾಕ್ ಆಗಿದ್ದು ವಿಡಿಯೋ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...