AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ

ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on:Mar 25, 2025 | 10:20 AM

Share

ಕೋಲಾರ ನಗರದ ಕೀಲುಕೋಟೆ ಬಡಾವಣೆಯಲ್ಲಿ, ಸ್ಪಂದನ ರಂಗನಾಥ್ ಅವರ ಮನೆಯ ಹೆಲ್ಮೆಟ್‌ನಲ್ಲಿ ಹಾವು ಸಿಲುಕಿತ್ತು. ಮನೆಯವರು ಉರಗ ರಕ್ಷಕ ಆನಂದ್ ಅವರಿಗೆ ಸಹಾಯಕ್ಕಾಗಿ ಕರೆ ಮಾಡಿದರು. ಆನಂದ್ ತಕ್ಷಣ ಆಗಮಿಸಿ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಬಿಟ್ಟರು. ಈ ಘಟನೆಯು ಉರಗ ರಕ್ಷಣೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಹಾವುಗಳನ್ನು ಕೊಲ್ಲದೆ ರಕ್ಷಿಸುವುದು ಮುಖ್ಯ ಎಂದು ಈ ಘಟನೆ ಸಾರಿ ಹೇಳುತ್ತದೆ.

ಕೋಲಾರ ನಗರದ ಕೀಲುಕೋಟೆ ಬಡಾವಣೆಯ ಮನೆಯೊಂದರಲ್ಲಿ ಇಟ್ಟಿದ್ದ ಹೆಲ್ಮೆಟ್​ ಒಳಗೆ ಸೇರಿಕೊಂಡಿದ್ದ ಹಾವನ್ನು ರಕ್ಷಣೆ ಮಾಡಲಾಗಿದೆ. ಸ್ಪಂದನ ರಂಗನಾಥ್ ಅವರ ಮನೆಯಲ್ಲಿನ ಹೆಲ್ಮೆಟ್​ನಲ್ಲಿ ಹಾವು ಸೇರಿಕೊಂಡಿತ್ತು. ಮನೆಯವರು ಉರಗ ರಕ್ಷಕ ಜೀವಿ ಆನಂದ್ ಅವರಿಗೆ ವಿಚಾರ ತಿಳಿಸಿದರು. ಕೂಡಲೇ ಉರಗ ರಕ್ಷಕ ಆನಂದ್​ ಅವರು ಸ್ಪಂದನ ರಂಗನಾಥ್ ಅವರ ಮನೆಗೆ ಆಗಮಿಸಿ, ಹೆಲ್ಮೇಟ್​ ಒಳಗೆ ಸೇರಿಕೊಂಡಿದ್ದ ಹಾವನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

Published on: Mar 25, 2025 10:17 AM
Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More