ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯನ್ನ ರಕ್ಷಿಸಿದ NDRF ಸಿಬ್ಬಂದಿ, ಎಲ್ಲಿ?

[lazy-load-videos-and-sticky-control id=”bbESSgJZVLI”] ಯಾದಗಿರಿ: ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ, ನದಿಯ ಪ್ರವಾಹದಿಂದ ಅಲ್ಲೇ ಸಿಲುಕಿಕೊಂಡು ಪರದಾಡುವ ಸ್ಥಿತಿ ಜಿಲ್ಲೆಯಲ್ಲಿ ಕಂಡು ಬಂತು.  ವಿಷಯ ತಿಳಿದು ಸ್ಥಳಕ್ಕೆ ಬಂದ NDRF ತಂಡ ಬೋಟ್ ಮುಖಾಂತರ ಕುರಿಗಾಹಿ ಮತ್ತು ಆತನ ಕುರಿಗಳನ್ನು ರಕ್ಷಿಸಿದ್ದಾರೆ. ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಐಬಿ ತಾಂಡದ ಟೋಪಣ್ಣ ಕೃಷ್ಣ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರಿಂದ […]

ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯನ್ನ ರಕ್ಷಿಸಿದ NDRF ಸಿಬ್ಬಂದಿ, ಎಲ್ಲಿ?
ಸಾಧು ಶ್ರೀನಾಥ್​

Updated on: Aug 09, 2020 | 2:34 PM

[lazy-load-videos-and-sticky-control id=”bbESSgJZVLI”]

ಯಾದಗಿರಿ: ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ, ನದಿಯ ಪ್ರವಾಹದಿಂದ ಅಲ್ಲೇ ಸಿಲುಕಿಕೊಂಡು ಪರದಾಡುವ ಸ್ಥಿತಿ ಜಿಲ್ಲೆಯಲ್ಲಿ ಕಂಡು ಬಂತು.  ವಿಷಯ ತಿಳಿದು ಸ್ಥಳಕ್ಕೆ ಬಂದ NDRF ತಂಡ ಬೋಟ್ ಮುಖಾಂತರ ಕುರಿಗಾಹಿ ಮತ್ತು ಆತನ ಕುರಿಗಳನ್ನು ರಕ್ಷಿಸಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಐಬಿ ತಾಂಡದ ಟೋಪಣ್ಣ ಕೃಷ್ಣ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು.

ಸ್ಥಳೀಯರಿಂದ ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ರಾಜಗೌಡ ಈ ವಿಷಯವನ್ನು NDRF ಸಿಬ್ಬಂದಿಗೆ ತಲುಪಿಸಿದರು. ಸ್ಥಳಕೆ ಬಂದ NDRF ತಂಡ ಬೋಟ್ ಮುಖಾಂತರ ಟೋಪಣ್ಣ ಮತ್ತು ಆತನ ಕುರಿಗಳನ್ನು ಸುರಕ್ಷಿತವಾಗಿ ದಡ ಮುಟ್ಟಿಸಿದ್ದಾರೆ.

Published On - 1:15 pm, Sun, 9 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us