ದಾವಣಗೆರೆಯಲ್ಲಿ ಶೂಟ್ ಮಾಡಿಕೊಂಡು ನಿವೃತ್ತ ಡಿವೈಎಸ್ಪಿ ಸಾವು
ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (70) ಎಂದು ಗುರುತಿಸಲಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ಗನ್ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿವೈಎಸ್ಪಿಯಾಗಿದ್ದ ಅವರು 2014ರಲ್ಲಿ ನಿವೃತರಾಗಿದ್ದರು. ಬಳಿಕ ಅವರು ದಾವಣಗೆರೆಗೆ ಬಂದು ನೆಲೆಸಿದ್ದರು. ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ (ಕೆಟಿಜೆ ನಗರ) ಕಚೇರಿ ಬಳಿ ಇರುವ ಮನೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ದಾವಣಗೆರೆ, ನವೆಂಬರ್ 29: ದಾವಣಗೆರೆಯಲ್ಲಿ (Davanagere) ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (70) ಎಂದು ಗುರುತಿಸಲಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ಗನ್ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿವೈಎಸ್ಪಿಯಾಗಿದ್ದ ಅವರು 2014ರಲ್ಲಿ ನಿವೃತರಾಗಿದ್ದರು. ಬಳಿಕ ಅವರು ದಾವಣಗೆರೆಗೆ ಬಂದು ನೆಲೆಸಿದ್ದರು. ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ (ಕೆಟಿಜೆ ನಗರ) ಕಚೇರಿ ಬಳಿ ಇರುವ ಮನೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
