AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಎಂಬುದು ಧರ್ಮವೇ ಅಲ್ಲ, RSS ವಿರುದ್ಧ ಮಾತನಾಡಲು ಭಯ ಬೇಡ: ನಿವೃತ್ತ ನ್ಯಾಯಮೂರ್ತಿ ವಿವಾದಾತ್ಮಕ ಮಾತು

ಹಿಂದೂ ಎಂಬುದು ಧರ್ಮವೇ ಅಲ್ಲ, RSS ವಿರುದ್ಧ ಮಾತನಾಡಲು ಭಯ ಬೇಡ: ನಿವೃತ್ತ ನ್ಯಾಯಮೂರ್ತಿ ವಿವಾದಾತ್ಮಕ ಮಾತು

ಸುರೇಶ ನಾಯಕ
| Edited By: |

Updated on:Dec 08, 2025 | 12:49 PM

Share

ಆರ್​ಎಸ್​ಎಸ್ ಅನ್ನು ಟೀಕಿಸುವ ಭರದಲ್ಲಿ ಮುಂಬೈ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಜಿ. ಕೋಲ್ಸೆ ಪಾಟೀಲ್ ಹಿಂದೂ ಧರ್ಮ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಕೋಲ್ಸೆ ಪಾಟೀಲ್ ಆಡಿರುವ ಮಾತುಗಳು ಇಲ್ಲಿವೆ.

ಬೀದರ್, ಡಿಸೆಂಬರ್ 8: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಭಾನುವಾರ ನಡೆದಿದ್ದ ಸೂಫಿ–ಸಂತರ ಸಮಾವೇಶದಲ್ಲಿ ಮುಂಬೈ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಜಿ. ಕೋಲ್ಸೆ ಪಾಟೀಲ್ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ದೊಡ್ಡ ಸಂಚಲನ ಮೂಡಿಸಿವೆ. ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಯೋಜಿಸಿದ್ದ ಈ ಸಮಾವೇಶದಲ್ಲಿ ಅವರು ಹಿಂದೂ ಧರ್ಮ, ಬ್ರಾಹ್ಮಣರು ಹಾಗೂ ಆರ್‌ಎಸ್‌ಎಸ್ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿ ಟೀಕಿಸಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಕೋಲ್ಸೆ ಪಾಟೀಲ್, ‘‘ಹಿಂದೂ ಎಂಬುದು ಧರ್ಮವೇ ಅಲ್ಲ. ಅದು ಪರ್ಷಿಯನ್ ಪದ; ಪರ್ಷಿಯನ್ ಭಾಷೆಯಲ್ಲಿ ‘ಹಿಂದೂ’ ಎಂದರೆ ಬೈಗುಳ ಎಂಬ ಅರ್ಥ ಇದೆ. ಬ್ರಾಹ್ಮಣರು ಅವರ ಬುದ್ಧಿಯಿಂದ ಜನರನ್ನು ಗುಲಾಮರನ್ನಾಗಿ ಮಾಡಿ ಹಿಂದೂ ಧರ್ಮ ಎಂದು ಸೃಷ್ಟಿ ಮಾಡಿದ್ದಾರೆ’’ ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ‘ದೇಶದಲ್ಲಿನ ಎಲ್ಲಾ ದಂಗೆಗಳಿಗೆ, ಸಿಖ್ಖರ ದಂಗೆಗೂ ಆರ್‌ಎಸ್‌ಎಸ್ ಕಾರಣ. ಅನೇಕರು ಆರ್‌ಎಸ್‌ಎಸ್ ವಿರುದ್ಧ ಮಾತನಾಡಲು ಭಯ ಪಡ್ತಾರೆ. ಬ್ರಾಹ್ಮಣರು ಮತ್ತು ಆರ್‌ಎಸ್‌ಎಸ್ ವಿರುದ್ಧ ಮಾತನಾಡಲು ಭಯಪಡಬೇಡಿ; ಅವರು ದೇಶದಲ್ಲಿ ಇರುವುದು ಕೇವಲ ಒಂದು ಪರ್ಸೆಂಟ್ ಮಾತ್ರ’ ಎಂದು ಕೋಲ್ಸೆ ಪಾಟೀಲ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 08, 2025 12:47 PM
Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More