AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲಾರಿಗೆ ಸಾರ್ವಜನಿಕರಿಂದ ಥಳಿತ

ತುಮಕೂರು: ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲಾರಿಗೆ ಸಾರ್ವಜನಿಕರಿಂದ ಥಳಿತ

Rakesh Nayak Manchi
Rakesh Nayak Manchi|

Updated on: Jun 12, 2023 | 4:47 PM

Share

ಬೈಕ್ ನಿಲ್ಲಿಸುವ ವಿಚಾರದಲ್ಲಿ ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲರಿಗೆ ಸಾರ್ವಜನಿಕರು ಥಳಿಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಾಸನ ವೃತ್ತದಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶಕ್ಕೆ ನಿವೃತ್ತ ಪ್ರಿನ್ಸಿಪಾಲ್ ಸ್ಥಳದಿಂದ ಓಡಿ ಹೋದರು.

ತುಮಕೂರು: ಬೈಕ್ ನಿಲ್ಲಿಸುವ ವಿಚಾರದಲ್ಲಿ ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲರಿಗೆ ಸಾರ್ವಜನಿಕರು ಥಳಿಸಿದ ಘಟನೆ ತುಮಕೂರು (Tumkur) ಜಿಲ್ಲೆಯ ತಿಪಟೂರಿನ ಹಾಸನ ವೃತ್ತದಲ್ಲಿ ನಡೆದಿದೆ. ಎಸ್​ಬಿಐ ಬ್ಯಾಂಕ್ ಬಳಿ ತಿಪಟೂರಿನ ಕಲ್ಪತರು ಕಾಲೇಜಿನ ನಿವೃತ್ತ ಪ್ರಾಂಶುಪಾಕರ ಶಿರೂರ್ ರಂಪಾಟ ನಡೆಸಿದ್ದು, ಅನಾವಶ್ಯಕವಾಗಿ ಅವಾಶ್ಚ್ಯ ಪದಗಳಿಂದ ಸಾರ್ವಜನಿಕರ ನಿಂದಿಸಿದ್ದಾರೆ. ಇದರಿಂದಾಗಿ ರೊಚ್ಚಿಗೆದ್ದ ಸಾರ್ವಜನಿಕರು ಪ್ರಶ್ನಿಸಿ ಥಳಿಸಿದ್ದಾರೆ. ಭೀತಿಗೊಂಡ ಶಿರೂರ್ ಎಸ್​ಬಿಐ ಬ್ಯಾಂಕ್ ಒಳಗೆ ಓಡಿದರಲ್ಲದೆ, ನಂತರ ಸ್ಥಳದಿಂದಲೇ ಓಡಿಹೋದರು. ಘಟನೆಯ ದೃಶ್ಯವನ್ನು ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆ ಹಿಡಿಯಲಾಗಿದೆ.

ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.