AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪ್ರಿಯಾಂಕಾ ಗಾಂಧಿ ವೇದಿಕೆಗೆ ಬರೋದನ್ನು ಕಂಡು ಸ್ಟನ್ ಆಗುವ ರೇವಂತ್ ರೆಡ್ಡಿ ಸ್ವಲ್ಪ ಸಮಯ ಭಾಷಣ ನಿಲ್ಲಿಸಿಬಿಡುತ್ತಾರೆ!

ಕಲಬುರಗಿ: ಪ್ರಿಯಾಂಕಾ ಗಾಂಧಿ ವೇದಿಕೆಗೆ ಬರೋದನ್ನು ಕಂಡು ಸ್ಟನ್ ಆಗುವ ರೇವಂತ್ ರೆಡ್ಡಿ ಸ್ವಲ್ಪ ಸಮಯ ಭಾಷಣ ನಿಲ್ಲಿಸಿಬಿಡುತ್ತಾರೆ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 29, 2024 | 7:38 PM

Share

ಏತನ್ಮಧ್ಯೆ, ಖರ್ಗೆ, ಪ್ರಿಯಾಂಕಾ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಒಂದು ಗಹನವಾದ ಚರ್ಚೆ ನಡೆಯುತ್ತದೆ. ಒಂದು ಹಂತದಲ್ಲಿ ಸೀನಿಯರ್ ಖರ್ಗೆ ಸಾಹೇಬರು ತಮ್ಮ ಮಗನಿಗೆ, ‘ನಿಂದೇ ಹೇಳ್ಬ್ಯಾಡ, ಅವ್ರು ಹೇಳಾದ್ ಬೀ  ಜರಾ ಕೇಳು!’ ಅಂದರೇನೋ ಅಂತ ಭಾಸವಾಗುತ್ತದೆ.

ಕಲಬುರಗಿ: ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ (Kalaburagi Congress convention) ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಭಾಗಿಯಾದರು. ಅವರು ವೇದಿಕೆಗೆ ಬರುವ ಮೊದಲು ತೆಲಂಗಾಂಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಸಭೆಯನ್ನುದ್ದೇಶಿಸಿ ಮಾತಾಡುತ್ತಿದ್ದರು. ಕಲಬುರಗಿಯಲ್ಲಿ ತೆಲುಗು ಭಾಷಿಕರ ಸಂಖ್ಯೆ ತೀರ ಕಮ್ಮಿ, ಹಾಗಾಗಿ ರೆಡ್ಡಿಯವರು ತೆಲುಗಿನಲ್ಲಿ ಮಾತಾಡಿದ್ದರಿಂದ ಅವರ ಭಾಷಣ ಬಹಳಷ್ಟು ಜನರಿಗೆ ಅರ್ಥವಾಗಿರಲಿಕ್ಕಿಲ್ಲ. ಅದರೆ, ಪ್ರಿಯಾಂಕಾ ಗಾಂಧಿ ವೇದಿಕೆ ಹತ್ತುತ್ತಿದ್ದ ದೃಶ್ಯ ಕಂಡ ಕೂಡಲೇ ಜನರ ಹರ್ಷೋಲ್ಲಾಸ ಮುಗಿಲು ಮುಟ್ಟುತ್ತದೆ. ಒಂದು ಕ್ಷಣ ಗರಬಡಿದವರಂತಾಗುವ ರೇವಂತ್ ರೆಡ್ಡಿಯವರು ಪ್ರಿಯಾಂಕಾ ಬರುವ ದಿಕ್ಕಿನೆಡೆ ಮುಖ ಮಾಡಿ ನಿಂತುಬಿಡುತ್ತಾರೆ. ಪ್ರಿಯಾಂಕಾ ಜನರತ್ತ ಕೈ ಬೀಸಿ, ವೇದಿಕೆ ಮೇಲಿದ್ದ ಎಲ್ಲರಿಗೆ ನಮಸ್ಕರಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಆತ್ಮೀಯವಾಗಿ ಮಾತಾಡುತ್ತಾ ಚೇರ್ ನಲ್ಲಿ ಕೂರುವವರೆಗೆ ಭಾಷಣ ನಿಲ್ಲಿಸಿದ್ದ ರೆಡ್ಡಿ ತಮ್ಮ ಮಾತು ಮುಂದುವರಿಸುತ್ತಾರೆ. ಏತನ್ಮಧ್ಯೆ, ಖರ್ಗೆ, ಪ್ರಿಯಾಂಕಾ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಒಂದು ಗಹನವಾದ ಚರ್ಚೆ ನಡೆಯುತ್ತದೆ. ಒಂದು ಹಂತದಲ್ಲಿ ಸೀನಿಯರ್ ಖರ್ಗೆ ಸಾಹೇಬರು ತಮ್ಮ ಮಗನಿಗೆ, ‘ನಿಂದೇ ಹೇಳ್ಬ್ಯಾಡ, ಅವ್ರು ಹೇಳಾದ್ ಬೀ  ಜರಾ ಕೇಳು!’ ಅಂದರೇನೋ ಅಂತ ಭಾಸವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ: ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ 371 ಜೆ ವಿಧಿ ಜಾರಿಗೊಳ್ಳಲು ಮಲ್ಲಿಕಾರ್ಜುನ ಖರ್ಗೆ ಕಾರಣ: ಸಿದ್ದರಾಮಯ್ಯ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.