AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಚಾಕುವಿನಿಂದ ಇರಿಯುತ್ತಿರುವ ಭಯಾನಕ ವಿಡಿಯೋ

ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಚಾಕುವಿನಿಂದ ಇರಿಯುತ್ತಿರುವ ಭಯಾನಕ ವಿಡಿಯೋ

ದಿಲೀಪ್​, ಚೌಡಹಳ್ಳಿ
| Edited By: |

Updated on:May 15, 2025 | 4:04 PM

Share

ಮಂಡ್ಯ ಜಿಲ್ಲೆಯ ಜಿಲ್ಲೆಯ ಪಾಂಡವಪುರ ಮಾಣಿಕ್ಯಹಳ್ಳಿಯ ಶಿಕ್ಷಕಿ ದಿಪೀಕಾ ಹತ್ಯೆಗೆ ಆಕೆಯ ತಂದೆ ಪ್ರತೀಕಾರ ತೀಸಿಕೊಂಡಿದ್ದಾನೆ. ನಿತೀಶ್ ಎನ್ನುವಾತ 28-ವರ್ಷ ವಯಸ್ಸಿನ ದೀಪಿಕಾಳನ್ನ ಕೊಲೆ ಮಾಡಿ ಬಳಿಕ ಮೇಲುಕೋಟೆ ಬೆಟ್ಟದ ಬಳಿ ಹೂತಿಟ್ಟಿದ್ದ. ಇದೀಗ ಒಂದು ವರ್ಷದ ಬಳಿಕ ನಿತೀಶ್ ತಂದೆಯನ್ನೇ ದೀಪಿಕಾಳ ತಂದೆ ಬರ್ಬರವಾಗಿ ಕೊಲೆ ಮಾಡಿ ಮಗಳ ಹತ್ಯೆಗೆ ಪ್ರತೀಕಾರ ತೀರಿಸಿಕೊಂಡಿದ್ದಾನೆ.

ಮಂಡ್ಯ, (ಮೇ 15): ಮಂಡ್ಯ ಜಿಲ್ಲೆಯ ಜಿಲ್ಲೆಯ ಪಾಂಡವಪುರ ಮಾಣಿಕ್ಯಹಳ್ಳಿಯ ಶಿಕ್ಷಕಿ ದಿಪೀಕಾ ಹತ್ಯೆಗೆ ಆಕೆಯ ತಂದೆ ಪ್ರತೀಕಾರ ತೀಸಿಕೊಂಡಿದ್ದಾನೆ. ನಿತೀಶ್ ಎನ್ನುವಾತ 28-ವರ್ಷ ವಯಸ್ಸಿನ ದೀಪಿಕಾಳನ್ನ ಕೊಲೆ ಮಾಡಿ ಬಳಿಕ ಮೇಲುಕೋಟೆ ಬೆಟ್ಟದ ಬಳಿ ಹೂತಿಟ್ಟಿದ್ದ. ಇದೀಗ ಒಂದು ವರ್ಷದ ಬಳಿಕ ನಿತೀಶ್ ತಂದೆಯನ್ನೇ ದೀಪಿಕಾಳ ತಂದೆ ಬರ್ಬರವಾಗಿ ಕೊಲೆ ಮಾಡಿ ಮಗಳ ಹತ್ಯೆಗೆ ಪ್ರತೀಕಾರ ತೀರಿಸಿಕೊಂಡಿದ್ದಾನೆ.

ಮಾಣಿಕ್ಯನಹಳ್ಳಿ (Manikyanahalli) ಗ್ರಾಮದ ನರಸಿಂಹೇಗೌಡ ಕೊಲೆ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಕೊಲೆ ಆರೋಪಿ. ಮಾಣಿಕ್ಯಹಳ್ಳಿ ಗ್ರಾಮದ ದೀಪಿಕಾಳನ್ನು ((Deepika)) ಅದೇ ಗ್ರಾಮದ ನಿತೀಶ್ ಎಂಬಾತ 2024ರ ಜನವರಿ 22 ರಂದು ಬರ್ಬರವಾಗಿ ಕೊಲೆ ಮಾಡಿದ್ದ. ಇದೇ ಪ್ರತೀಕಾರವಾಗಿ ದೀಪಳ ತಂದೆ ವೆಂಕಟೇಶ್, ತನ್ನ ಮಗಳ ಹಂತಕನ ತಂದೆ ನರಸಿಂಹೇಗೌಡ ಹತ್ಯೆ ಮಾಡಿದ್ದಾನೆ. ನನ್ನ ಮಗಳನ್ನ ಸಾಯಿಸಿ ನಿನ್ನ ಮಗಳಿಗೆ ಮದುವೆ ಮಾಡುತ್ತಿದ್ದಿಯಾ ಎಂದು ಬರ್ಬರವಾಗಿ ಕೊಲೆ ಮಾಡಿ ಎಸ್ಕೆಪ್ ಆಗಿದ್ದ. ಇನ್ನು ಚಾಕುವಿನಿಂದ ಮನಸ್ಸಿಗೆ ಬಂದಂತೆ ಇರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಕುವಿನಿಂದ ಚುಚ್ಚುತ್ತಿರುವುದನ್ನು ಜನರು ನೋಡುತ್ತಾ ನಿಂತಿದ್ದಾರೆ. ಇನ್ನು ವಿಡಿಯೋ ನೋಡಲು ಭಯಾನಕವಾಗಿದೆ.

ಇದನ್ನೂ ಓದಿ: ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ

Published on: May 15, 2025 04:02 PM
Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More