AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೂರು ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡರ ಮುಂದೆ ಕೈಕಟ್ಟಿ ನಿಂತಿದ್ದು ಯಾಕೆ ಗೊತ್ತಾ?

ಈ ವಿಡಿಯೋದಲ್ಲಿ ಗಮನಿಸಬೇಕಾದ ಅಂಶವೆಂದರೆ, ಅಧಿಕಾರಿಗಳ ಕರ್ತವ್ಯಲೋಪ ನಿಚ್ಚಳವಾಗಿ ಕಾಣುತ್ತಿದ್ದರೂ ಮತ್ತು ತಮ್ಮ ಪ್ರಶ್ನೆಗಳಿಗೆ ಉತ್ತರ ಸಿಗದಿದ್ದರೂ ಸಚಿವ ಕೃಷ್ಣ ಭೈರೇಗೌಡ ಅವರ ಮೇಲೆ ರೇಗುತ್ತಾರೆಯೇ ಹೊರತು, ಏಕವಚನದ ಪ್ರಯೋಗ ಮಾಡಲ್ಲ, ಬಯ್ಯಲ್ಲ; ಸಭ್ಯ ಭಾಷೆಯಲ್ಲೇ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 06, 2024 | 4:10 PM

Share

ಮೈಸೂರು: ಸರ್ಕಾರೀ ಅಧಿಕಾರಿಗಳಲ್ಲಿ ಕರ್ತವ್ಯಲೋಲುಪತೆ, ಜಡತ್ವ, ಕರ್ತವ್ಯಲೋಪವನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಯಾವ ಕಾರಣಕ್ಕೂ ಸಹಿಸಲ್ಲ. ಅವರು ನಡೆಸುವ ಪ್ರಗತಿ ಪರಿಶೀಲನಾ ಸಭೆಗಳನ್ನು (KDP meeting) ನೀವು ನೋಡಿರಬಹುದು. ಮುಲಾಜಿಲ್ಲದೆ ತಪ್ಪಿತಸ್ಥ ಆಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಇಂದು ಅವರು ಜಿಲ್ಲೆಯ ಹುಣಸೂರು ತಾಲ್ಲೂಕು ಕಚೇರಿಗೆ (Hunsur taluk office) ಸರ್ಪೈಸ್ ಭೇಟಿ ನೀಡಿ ಅಲ್ಲಿನ ನ್ಯೂನತೆಗಳನ್ನು ಕಂಡು ಅಧಿಕಾರಿಗಳ ಬೇಜವಬ್ದಾರಿತನವನ್ನು ತರಾಟೆಗೆ ತೆಗೆದುಕೊಂಡರು. ನಿರ್ದಿಷ್ಟವಾಗಿ ಜುಲೈ ತಿಂಗಳ ಎಂಟ್ರಿಗಳು ಮತ್ತು ಫಾರ್ವರ್ಡ್ ಆಗಿರುವ ಕಡತಗಳ ಬಗ್ಗೆ ಹಲವಾರು ಲೋಪಗಳನ್ನು ಅವರೆದುರು ಕೈಕಟ್ಟಿ ನಿಂತಿದ್ದ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತಂದರು. ಅವರ ಯಾವ ಪ್ರಶ್ನೆಗೂ ಅಧಿಕಾರಿಗಳಿಂದ ಸಮಾಧಾನಕರ ಉತ್ತರ ಸಿಗಲಿಲ್ಲ. ಕಚೇರಿಯ ಒಂದು ಗುಡ್ಡೆ ಬಿದ್ದಿದ್ದ ಕಡತಗಳನ್ನು ನೋಡಿ ಅವುಗಳ ಸ್ಟೇಟಸ್ ಬಗ್ಗೆ ವಿಚಾರಿಸಿದರು. ಅಧಿಕಾರಿಗಳದ್ದು ಅದೇ ಪೆ ಪೆ ಪೆ ಉತ್ತರ. ಈ ವಿಡಿಯೋದಲ್ಲಿ ಗಮನಿಸಬೇಕಾದ ಅಂಶವೆಂದರೆ, ಅಧಿಕಾರಿಗಳ ಕರ್ತವ್ಯಲೋಪ ನಿಚ್ಚಳವಾಗಿ ಕಾಣುತ್ತಿದ್ದರೂ ಮತ್ತು ತಮ್ಮ ಪ್ರಶ್ನೆಗಳಿಗೆ ಉತ್ತರ ಸಿಗದಿದ್ದರೂ ಸಚಿವ ಕೃಷ್ಣ ಭೈರೇಗೌಡ ಅವರ ಮೇಲೆ ರೇಗುತ್ತಾರೆಯೇ ಹೊರತು, ಏಕವಚನದ ಪ್ರಯೋಗ ಮಾಡಲ್ಲ, ಬಯ್ಯಲ್ಲ; ಸಭ್ಯ ಭಾಷೆಯಲ್ಲೇ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ