AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ 50 ವರ್ಷಗಳಲ್ಲಿ ಮಾಡದ್ದನ್ನು ಕೇವಲ 10 ವರ್ಷಗಳಲ್ಲಿ ಮಾಡಿರುವ ಪ್ರಧಾನಿ ಮೋದಿ ಒಬ್ಬ ಕ್ರಾಂತಿಪುರುಷ: ಬಸನಗೌಡ ಯತ್ನಾಳ್

ಕಾಂಗ್ರೆಸ್ 50 ವರ್ಷಗಳಲ್ಲಿ ಮಾಡದ್ದನ್ನು ಕೇವಲ 10 ವರ್ಷಗಳಲ್ಲಿ ಮಾಡಿರುವ ಪ್ರಧಾನಿ ಮೋದಿ ಒಬ್ಬ ಕ್ರಾಂತಿಪುರುಷ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 12, 2024 | 6:35 PM

Share

ಆ ಶಿವಾಜಿ ನಂತರ ಈಗ ದೇಶದಲ್ಲಿ ಮತ್ತೊಬ್ಬ ಶಿವಾಜಿ ಅವತರಿಸಿದ್ದಾರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ರೂಪದಲ್ಲಿ ಎಂದು ಯತ್ನಾಳ್ ಹೇಳಿದರು. ಮೋದಿಯವರು ಏನು ಮಾಡಿದ್ದಾರೆ ಅಂತ ಕಾಂಗ್ರೆಸ್ ನವರು ಕೇಳುತ್ತಾರೆ. ಕಾಂಗ್ರೆಸ್ 50-60 ವರ್ಷಗಳಲ್ಲಿ ಮಾಡಲಾಗದ್ದನ್ನು ಮೋದಿ ಕೇವಲ 10 ವರ್ಷದಲ್ಲಿ ಮಾಡಿದ್ದಾರೆ, ಅವರೊಬ್ಬ ಕ್ರಾಂತಿ ಪುರುಷ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಕಾರವಾರ: ನಗರದಲ್ಲಿಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಪರ ಪ್ರಚಾರ ಮಾಡಿದ ಹಿರಿಯ ಬಿಜೆಪಿ ನಾಯಕ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರು, ಈ ಬಾರಿ ಲೋಕಸಭಾ ಚುನಾವಣೆ ನಡೆಯುತ್ತಿರೋದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗಾಗಿ ಅಲ್ಲ, ಈ ದೇಶವನ್ನು ರಕ್ಷಿಸಲು ಮತ್ತು ಹಿಂದೂತ್ವವನ್ನು ಉಳಿಸಲು ಎಂದು ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಮಾತಾಡಿದ ಯತ್ನಾಳ್, ಹಿಂದೂತ್ವ ಉಳಿಸಲು ಅವರು ಮಾಡಿದ್ದು ಸಾಮಾನ್ಯ ಕೆಲಸವಲ್ಲ, ಅವರಿಲ್ಲದೆ ಹೋಗಿದ್ದರೆ ಇವತ್ತು ಭಾರತದ ಹಿಂದೂಗಳೆಲ್ಲ ಸುನ್ನತಿ ಮಾಡಿಕೊಂಡು ದಾಡಿಬಿಟ್ಟುಕೊಂಡು ತಿರುಗಬೇಕಾಗುತಿತ್ತು ಎಂದರು. ಆ ಶಿವಾಜಿ ನಂತರ ಈಗ ದೇಶದಲ್ಲಿ ಮತ್ತೊಬ್ಬ ಶಿವಾಜಿ ಅವತರಿಸಿದ್ದಾರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ರೂಪದಲ್ಲಿ ಎಂದು ಯತ್ನಾಳ್ ಹೇಳಿದರು. ಮೋದಿಯವರು ಏನು ಮಾಡಿದ್ದಾರೆ ಅಂತ ಕಾಂಗ್ರೆಸ್ ನವರು ಕೇಳುತ್ತಾರೆ. ಕಾಂಗ್ರೆಸ್ 50-60 ವರ್ಷಗಳಲ್ಲಿ ಮಾಡಲಾಗದ್ದನ್ನು ಮೋದಿ ಕೇವಲ 10 ವರ್ಷದಲ್ಲಿ ಮಾಡಿದ್ದಾರೆ, ಅವರೊಬ್ಬ ಕ್ರಾಂತಿ ಪುರುಷ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕರೆ ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.