ಗೋಕರ್ಣಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ರಿಷಬ್; ಗೆಳೆಯ ರಕ್ಷಿತ್ ಹೆಸರಲ್ಲೂ ವಿಶೇಷ ಸಂಕಲ್ಪ

Updated on: Jun 07, 2024 | 8:40 AM

ರಿಷಬ್ ಅವರು ಈಗ ಅವರು ಪತ್ನಿ ಜೊತೆ ಗೋಕರ್ಣಕ್ಕೆ ತೆರಳಿದ್ದಾರೆ. ಮಹಾಬಲೇಶ್ವರ ದೇವಾಲಯದಲ್ಲಿ ಮಹಾಗಣಪತಿಗೆ ಪೂಜೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಗೋಕರ್ಣದ ಶಕ್ತಿ ದೇವತೆ ಸ್ಮಶಾನ ಕಾಳಿಗೆ ವಿಶೇಷ ಪೂಜೆ ಸಲ್ಲಿಕೆ ಆಗಿದೆ. ರಿಷಬ್ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ

ರಿಷಬ್ ಶೆಟ್ಟಿ (Rishab Shetty) ಅವರಿಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಅವರು ಈಗ ಅವರು ಪತ್ನಿ ಜೊತೆ ಗೋಕರ್ಣಕ್ಕೆ ತೆರಳಿದ್ದಾರೆ. ಮಹಾಬಲೇಶ್ವರ ದೇವಾಲಯದಲ್ಲಿ ಮಹಾಗಣಪತಿಗೆ ಪೂಜೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಗೋಕರ್ಣದ ಶಕ್ತಿ ದೇವತೆ ಸ್ಮಶಾನ ಕಾಳಿಗೆ ವಿಶೇಷ ಪೂಜೆ ಸಲ್ಲಿಕೆ ಆಗಿದೆ. ಜೂನ್ 6ರಂದು ರಕ್ಷಿತ್ ಶೆಟ್ಟಿಗೆ ಜನ್ಮದಿನ. ಅವರ ಹೆಸರಲ್ಲೂ ರಿಷಬ್ ವಿಶೇಷ ಸಂಕಲ್ಪ ಮಾಡಿದ್ದಾರೆ. ಇದರ ಜೊತೆಗೆ ‘ಕಾಂತಾರ 2’ ಚಿತ್ರದ ಗೆಲುವಿಗೂ ಕೋರಿದ್ದಾರೆ. ರಿಷಬ್ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಒಂದು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಶೀಘ್ರವೇ ಎರಡನೇ ಹಂತದ ಶೂಟಿಂಗ್ ಆರಂಭ ಆಗಲಿದೆಯಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More