Rishab Shetty: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಗೆ ಹೆಚ್ಚಾಯ್ತು ದೇವರ ಮೇಲಿನ ಭಕ್ತಿ

Updated on: May 12, 2023 | 8:09 AM

ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಆಶ್ಲೇಷಾ ಬಲಿ, ತುಲಾಭಾರ ಸೇವೆ ಮಾಡಿದ್ದಾರೆ.

ರಿಷಬ್ ಶೆಟ್ಟಿ (Rishab Shetty) ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿಗೆ ದೇವರ ಮೇಲೆ ಅಪಾರ ಭಕ್ತಿ. ‘ಕಾಂತಾರ’ ಸಿನಿಮಾ ಮಾಡಿದ ಬಳಿಕ ದೇವರ ಮೇಲೆ ಇರುವ ಭಕ್ತಿ ಹೆಚ್ಚಾಗಿದೆ. ಹೀಗಾಗಿ, ಅವರು ಆಗಾಗ ಪತ್ನಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡುತ್ತಾ ಇರುತ್ತಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಆಶ್ಲೇಷಾ ಬಲಿ, ತುಲಾಭಾರ ಸೇವೆ ಮಾಡಿದ್ದಾರೆ. ರಿಷಬ್ ಶೆಟ್ಟಿಯ ಜೊತೆ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us