ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಪ್ರವಾಸೋದ್ಯಮ ನೀತಿ ಬಗ್ಗೆ ಸಮಾಲೋಚನೆ
ಮುಖ್ಯಾಂಶಗಳು
- ಸದಾಶಿವನಗರದ ನಿವಾಸದಲ್ಲಿ ಸಿಎಂ ಡಿಕೆಶಿ ಭೇಟಿಯಾಗಿ ರಿಷಬ್ ಚರ್ಚೆ.
- ಕರಾವಳಿ, ಮಲೆನಾಡು ಪ್ರವಾಸೋದ್ಯಮ ನೀತಿ ಬಗ್ಗೆ ಸಮಾಲೋಚನೆ.
- ಇತ್ತೀಚಿಗಷ್ಟೇ ರಾಯಭಾರಿಯಾಗಿ ನೇಮಕಗೊಂಡಿದ್ದ ನಟ ರಿಷಬ್ ಶೆಟ್ಟಿ.
ಪ್ಯಾನ್ ಇಂಡಿಯಾ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು (ಜುಲೈ 5) ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಸಮಾಲೋಚನೆ ನಡೆಸಿದರು. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ಅವರು ನೇಮಕಗೊಂಡಿದ್ದರು.
ಸ್ಯಾಂಡಲ್ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಇಂದು (ಜುಲೈ 5) ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಸಮಾಲೋಚನೆ ನಡೆಸಿದರು. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ನೇಮಕಗೊಂಡಿದ್ದ ‘ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ, ಆ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿ ಹಾಗೂ ನೂತನ ನೀತಿಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಕರಾವಳಿ ಹಾಗೂ ಮಲೆನಾಡಿನ ಸಂಸ್ಕೃತಿ ಮತ್ತು ಚಿತ್ರೀಕರಣಕ್ಕೆ ಹೆಚ್ಚಿನ ಸೌಲಭ್ಯ ಒದಗಿಸುವ ಬಗ್ಗೆ ಈ ವೇಳೆ ಸಮಾಲೋಚನೆ ನಡೆಸಲಾಯಿತು. ಈ ಭೇಟಿಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಿಷಬ್ ಶೆಟ್ಟಿ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬ್ಯುಸಿ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

