ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ

Edited By:

Updated on: Oct 09, 2024 | 11:01 PM

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ವಾಪಸ್​ ಬಂದಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಈ ವೇಳೆ ಅವರು ದೈವಾರಾಧನೆಯ ಬಗ್ಗೆ ಮಾತನಾಡಿದ್ದಾರೆ. ದೈವದ ಆಶೀರ್ವಾದ ಇಲ್ಲದೇ ಇದ್ದರೆ ಈ ಮಟ್ಟಕ್ಕೆ ನಾವು ಹೋಗಲು ಸಾಧ್ಯವೇ ಇರಲಿಲ್ಲ. ಅದನ್ನೆಲ್ಲ ಯೋಚನೆಯೂ ಮಾಡೋಕೆ ಆಗಲ್ಲ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

‘ದೈವಾರಾಧನೆ ಬಗ್ಗೆ ಕಾಂತಾರ ಸಿನಿಮಾಗಿಂತಲೂ ಮುನ್ನ ಬೇರೆ ಚಿತ್ರಗಳಲ್ಲಿ ಕೂಡ ತೋರಿಸಲಾಗಿತ್ತು. ಇದು ಜನಪ್ರಿಯ ಆದಾಗ ಮೂಲ ಸಂಸ್ಕೃತಿಯ ಬಗ್ಗೆ ಗೊತ್ತಿಲ್ಲದೇ ಇರುವವರು ಅದನ್ನು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅಣಕ ಮಾಡಿದಾಗ, ಅಪಹಾಸ್ಯ ಮಾಡಿದಾಗ ದೈವವನ್ನು ನಂಬುವ ನಮ್ಮಂಥವರಿಗೆ ಬೇಸರ ಆಗುತ್ತದೆ. ಮತ್ತೆ ಮತ್ತೆ ವೇದಿಕೆಗಳಲ್ಲಿ ಆ ರೀತಿ ಮಾಡಬಾರದು ಅಂತ ನಾನು ಮನವಿ ಮಾಡುತ್ತೇನೆ. ನಾವು ಕಾಂತಾರ ಮಾಡಿದಾಗ ಅದನ್ನು ಸಿನಿಮಾದ ರೀತಿ ಮಾಡಿಲ್ಲ. ಆ ಸಮುದಾಯದವರ ಸಹಾಯ ತೆಗೆದುಕೊಂಡು ಶ್ರದ್ಧೆಯಿಂದ, ನಿಜವಾಗಿ ದೈವದ ಸೇವೆ ಎಂಬ ಆಲೋಚನೆಯಲ್ಲಿ ಮಾಡಿದ್ದೆವು’ ಎಂದಿದ್ದಾರೆ ರಿಷಬ್​ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More