ರಿಷಬ್ ಶೆಟ್ಟಿ ನ್ಯಾಷನಲ್ ಅವಾರ್ಡ್ ಪಡೆದಿದ್ದಕ್ಕೆ ನಟ ಯಶ್ ನೀಡಿದ ಮೊದಲ ಪ್ರತಿಕ್ರಿಯೆ ಏನು?
‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡಿದ ‘ಕಾಂತಾರ’ ಹಾಗೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕೆ ರಿಷಬ್ ಶೆಟ್ಟಿ ಅವರು ‘ಅತ್ಯುತ್ತಮ ನಟ’ ನ್ಯಾಷನಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಈ ಖುಷಿಯಲ್ಲಿ ಯಶ್ ಅವರು ನೀಡಿದ ಮೊದಲ ಪ್ರತಿಕ್ರಿಯೆ ಏನು ಎಂಬ ಬಗ್ಗೆ ರಿಷಬ್ ಶೆಟ್ಟಿ ಮಾತನಾಡಿದ ವಿಡಿಯೋ ಇಲ್ಲಿದೆ..
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡದ ಸಿನಿಮಾಗಳು ಶೈನ್ ಆಗಿವೆ. ರಿಷಬ್ ಶೆಟ್ಟಿ ಅವರಿಗೆ ‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಒಲಿದಿದೆ. ಈ ಸುದ್ದಿ ತಿಳಿದು ನಟ ‘ರಾಕಿಂಗ್ ಸ್ಟಾರ್’ ಯಶ್ ಅವರು ದೂರವಾಣಿ ಮೂಲಕ ರಿಷಬ್ ಶೆಟ್ಟಿಗೆ ಅಭಿನಂದನೆ ತಿಳಿಸಿದರು. ಆ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘ಯಶ್ ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾಗೆ ತುಂಬ ದೊಡ್ಡ ಬೆಂಬಲ ನೀಡಿದ್ದರು. ಸಿನಿಮಾ ನೋಡಿ ನನಗೆ ವಿಶ್ ಮಾಡಿದ್ದರು. ಜನರಿಗೆ ಆ ಸಿನಿಮಾ ತಲುಪಲು ಅವರ ಕೊಡುಗೆ ಇತ್ತು. ಆ ಫೀಲಿಂಗ್ ಇಂದಿಗೂ ಅವರ ಮೇಲಿದೆ. ಇಂದು ಅವರು ಶೂಟಿಂಗ್ನಲ್ಲಿ ಇದ್ದರಂತೆ. ರಾಷ್ಟ್ರ ಪ್ರಶಸ್ತಿ ಬಂದ ತಕ್ಷಣ ಫೋನ್ ಮಾಡಿ ವಿಶ್ ಮಾಡಿದರು. ಖುಷಿ ಆಯಿತು, ತುಂಬ ಹೆಮ್ಮೆ ಎನಿಸುತ್ತಿದೆ ಅಂತ ಹೇಳಿದರು. ‘ಕೆಜಿಎಫ್ 2’ ಸಿನಿಮಾಗೆ ಪ್ರಶಸ್ತಿ ಬಂದಿದ್ದಕ್ಕೆ ನಾನು ಅವರಿಗೆ ವಿಶ್ ಮಾಡಿದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

