ಕಾಶಿಯಲ್ಲಿ ಭಕ್ತಿಯಿಂದ ಗಂಗಾ ಆರತಿ ಕಣ್ತುಂಬಿಕೊಂಡ ರಿಷಬ್; ಉತ್ತರದಲ್ಲಿ ಶೆಟ್ರ ಹವಾ ನೋಡಿ

Edited By:

Updated on: Oct 18, 2025 | 2:10 PM

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಕ ದೊಡ್ಡ ಯಶಸ್ಸು ಕಂಡಿರೋದು ಗೊತ್ತೇ ಇದೆ. ಈ ಸಿನಿಮಾ ಸೂಪರ್ ಹಿಟ್ ಆಯಿತು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಚಿತ್ರ ಗಮನ ಸೆಳೆದಿದೆ. ಉತ್ತರ ಪ್ರದೇಶದಲ್ಲಿ ರಿಷಬ್ ಶೆಟ್ಟಿ ಹವಾ ಹೇಗಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ಮೋಡಿ ಮಾಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಈಗ ಕಾಶಿಗೆ ತೆರಳಿದ್ದಾರೆ. ಅಲ್ಲಿ ಅವರು ವಿಶ್ವನಾಥನ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ಗಂಗೆಯ ತಟದಲ್ಲಿ ಕುಳಿತು ಗಂಗಾ ಆರತಿಯನ್ನು ಕೂಡ ಕಣ್ತುಂಬಿಕೊಂಡರು. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಉತ್ತರದಲ್ಲಿ ರಿಷಬ್​ನ ಗುರುತಿಸಿದ್ದಾರೆ. ಅಲ್ಲಿಯೂ ದೊಡ್ಡ ಅಭಿಮಾನಿ ಬಳಗ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More